‘ಐಫಾ 2022’ ಸಮಾರಂಭದಲ್ಲಿ ಎಸ್ಪಿಬಿ, ಲತಾಜೀ, ಕೆಕೆ ನಿಧನದ ಬಗ್ಗೆ ಮಾತನಾಡಿದ ಎ.ಆರ್. ರೆಹಮಾನ್
IIFA 2022: ‘ಸಂಗೀತಗಾರರು ನಮ್ಮನ್ನು ಬೇರೆ ಜಗತ್ತಿಗೆ ಕೊಂಡೊಯ್ಯುತ್ತಾರೆ. ಅಂಥವರನ್ನು ಕಳೆದುಕೊಂಡಿದ್ದಕ್ಕೆ ತೀವ್ರ ನೋವಾಗಿದೆ’ ಎಂದು ಎ.ಆರ್. ರೆಹಮಾನ್ ಹೇಳಿದ್ದಾರೆ.
ಕಳೆದ ಎರಡು ವರ್ಷಗಳಿಂದ ಕೊರೊನಾದಿಂದಾಗಿ ಅನೇಕ ಸಮಾರಂಭಗಳಿಗೆ ಬ್ರೇಕ್ ಬಿದ್ದಿದ್ದವು. ಈಗ ಜನಜೀವನ ಸಹಜ ಸ್ಥಿತಿಗೆ ಬಂದಿರುವುದರಿಂದ ‘ಐಫಾ’ ರೀತಿಯ ಕಾರ್ಯಕ್ರಮಗಳು ಮತ್ತೆ ನಡೆಯಲು ಸಾಧ್ಯವಾಗಿದೆ. ‘ಐಫಾ 2022’ (IIFA 2022) ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಂಗೀತ ಮಾಂತ್ರಿಕ ಎ.ಆರ್. ರೆಹಮಾನ್ ಅವರು ಪಾಲ್ಗೊಂಡಿದ್ದಾರೆ. ಈ ವೇಳೆ ಅವರು ಅಗಲಿದ ಸಾಧಕರನ್ನು ನೆನಪು ಮಾಡಿಕೊಂಡಿದ್ದಾರೆ. ಸಂಗೀತ ಲೋಕದ ಅನೇಕ ದಿಗ್ಗಜರನ್ನು ಕಳೆದುಕೊಂಡಿದ್ದು ನೋವಿನ ಸಂಗತಿ. ಎಸ್.ಪಿ. ಬಾಲಸುಬ್ರಹ್ಮಣ್ಯಂ (SPB), ಲತಾ ಮಂಗೇಶ್ಕರ್ ಹಾಗೂ ಕೆಕೆ ನಿಧನದ ಬಗ್ಗೆ ಎ.ಆರ್. ರೆಹಮಾನ್ (A R Rahman) ಮಾತನಾಡಿದ್ದಾರೆ. ‘ಸಂಗೀತಗಾರರು ನಮ್ಮನ್ನು ಬೇರೆ ಜಗತ್ತಿಗೆ ಕೊಂಡೊಯ್ಯುತ್ತಾರೆ. ಅಂಥವರನ್ನು ಕಳೆದುಕೊಂಡಿದ್ದಕ್ಕೆ ತೀವ್ರ ನೋವಾಗಿದೆ’ ಎಂದು ಅವರು ಹೇಳಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್ಗೆ ಅಮಿತ್ ಶಾ ಭೇಟಿ

ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ

ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು

ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
