Vijaya Sankalp Yatre: ಬಿಎಸ್ ಯಡಿಯೂರಪ್ಪರ ಬಗ್ಗೆ ಅತೀವ ಕಾಳಜಿ ಪ್ರದರ್ಶಿಸಿದ ಭದ್ರತಾ ಸಿಬ್ಬಂದಿ

ಅರುಣ್​ ಕುಮಾರ್​ ಬೆಳ್ಳಿ

Updated on: Mar 16, 2023 | 3:53 PM

ಮಾಜಿ ಮುಖ್ಯಮಂತ್ರಿಗಳು ಹೆಲಿಕಾಪ್ಟರ್ ಮೂಲಕ ಚಿಕ್ಕಮಗಳೂರು ತಲುಪಿ ಹೆಲಿಪ್ಯಾಡ್ ಬಳಿ ಕಾರು ಹತ್ತುವಾಗ ಅವರ ತಲೆ ವಾಹನದ ಟಾಪ್ ಗೆ ತಾಕೀತು ಅಂತ ಭದ್ರತೆಗೆ ನಿಯೋಜಿಸಲ್ಪಟ್ಟ ಸಿಬ್ಬಂದಿಯೊಬ್ಬರು ಕೈ ಅಡ್ಡ ಹಿಡಿದಿದ್ದು ನೋಡುಗರಿಗೆ ಅಪ್ಯಾಯಮಾನವೆನಿಸಿತು.

ಚಿಕ್ಕಮಗಳೂರು: ಕಾಫಿನಾಡು ಎಂದು ಕರೆಸಿಕೊಳ್ಳುವ ಚಿಕ್ಕ,ಮಗಳೂರಲ್ಲಿ ಇಂದು ಬಿಎಸ್ ಯಡಿಯೂರಪ್ಪ (BS Yediyurappa) ನೇತೃತ್ವದಲ್ಲಿ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ (Vijaya Sankalp Yatre) ಶುರುವಾಯಿತು. ಮಾಜಿ ಮುಖ್ಯಮಂತ್ರಿಗಳು ಹೆಲಿಕಾಪ್ಟರ್ ಮೂಲಕ ಚಿಕ್ಕಮಗಳೂರು ತಲುಪಿ ಹೆಲಿಪ್ಯಾಡ್ ಬಳಿ ಕಾರು ಹತ್ತುವಾಗ ಅವರ ತಲೆ ವಾಹನದ ಟಾಪ್ ಗೆ ತಾಕೀತು ಅಂತ ಭದ್ರತೆಗೆ ನಿಯೋಜಿಸಲ್ಪಟ್ಟ ಸಿಬ್ಬಂದಿಯೊಬ್ಬರು ಕೈ ಅಡ್ಡ ಹಿಡಿದಿದ್ದು ನೋಡುಗರಿಗೆ ಅಪ್ಯಾಯಮಾನವೆನಿಸಿತು. ಯಡಿಯೂರಪ್ಪನವರು ಕಾರೊಳಗೆ ಸೆಟ್ಲ್ ಅದ ಬಳಿಕವೇ ಅವರು ಕೈ ಸರಿಸುತ್ತಾರೆ. ಮತ್ತೊಬ್ಬ ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ (Sadananda Gowda) ಮತ್ತು ಸ್ಥಳೀಯ ಬಿಜೆಪಿ ನಾಯಕರು ಯಡಿಯೂರಪ್ಪನವರೊಂದಿಗೆ ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.