ಪ್ರಯಾಗ್​ರಾಜ್​ನಲ್ಲಿ ತ್ರಿವೇಣಿ ಸಂಗಮಕ್ಕೆ ಅಭಿಮುಖವಾಗಿ ನಿಂತು ಭಿನ್ನವಾಗಿ ಶಿವ ನಮಸ್ಕಾರ ಮಾಡಿದ ಶಿವಭಕ್ತ!

ಅರುಣ್​ ಕುಮಾರ್​ ಬೆಳ್ಳಿ

Updated on: Feb 26, 2025 | 11:29 AM

ಮಹಾಕುಂಭಮೇಳದ ಕೊನೆಯ ದಿನ ಒಂದು ಕೋಟಿಗೂ ಹೆಚ್ಚು ಜನ ಪ್ರಯಾಗ್​ರಾಜ್ ಬಳಿಯ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಲಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಮತ್ತು ಅನೇಕ ಗಣ್ಯರು ಸೇರಿದಂತೆ ಸುಮಾರು 64 ಕೋಟಿ ಭಕ್ತರು ಮಹಾಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿದ್ದಾರೆಂಬ ಮಾಹಿತಿ ಇದೆ.

ಪ್ರಯಾಗ್​ರಾಜ್ (ಉತ್ತರ ಪ್ರದೇಶ): ಕಳೆದ 45 ದಿನಗಳಿಂದ ನಡೆಯುತ್ತಿರುವ ಮಹಾಕುಂಭ ಮೇಳ ಮಹಾಶಿವರಾತ್ರಿಯಾಗಿರುವ ಇಂದು ಸಂಪನ್ನಗೊಳ್ಳಲಿದೆ. ಟಿವಿ9 ಪ್ರತಿನಿಧಿ ಪ್ರಯಾಗ್​ರಾಜ್ ನಿಂದ ವರದಿಯನ್ನು ಮಾಡುತ್ತಿದ್ದು ಹೈದರಾಬಾದ್ ನಗರದ ಒಬ್ಬ ಶಿವಭಕ್ತನನ್ನು ಮಾತಾಡಿಸಿದ್ದಾರೆ. ಪರಮ ಶಿವನ ಭಕ್ತನಾಗಿರುವ ಶ್ರೀನಿವಾಸ್, ಸಂಗಮಕ್ಕೆ ಅಭಿಮುಖವಾಗಿ ನಿಂತು ಮಾಡುತ್ತಿರೋದು ಸೂರ್ಯ ನಮಸ್ಕಾರ ಅಲ್ಲ, ಅದು ಶಿವ ನಮಸ್ಕಾರ. ಶಿವನ ದೀಕ್ಷೆ ಪಡೆದಿರುವ ಶ್ರೀನಿವಾಸ್ ಸೂರ್ಯೋದಯಕ್ಕೆ ಮೊದಲು ಮತ್ತು ಸೂರ್ಯಾಸ್ತದ ನಂತರ 21 ಇಲ್ಲವೇ 42 ಸಲ ಶಿವ ನಮಸ್ಕಾರ ಮಾಡುತ್ತಾರಂತೆ. ಹೀಗೆ ಮಾಡುವುದರಿಂದ ಶಿವನ ಭಕ್ತರು ಶಿವನ ಭಾಗವಾಗಲು ಸಾಧ್ಯವಾಗುತ್ತದೆ ಎಂದು ಶ್ರೀನಿವಾಸ್ ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಮಹಾಕುಂಭ ಮೇಳದ ಅಂತಿಮ ದಿನ: ಶಿವರಾತ್ರಿಯಂದು ಪುಣ್ಯಸ್ನಾನ ಮಾಡಿ ಶಿವನ ಕೃಪೆಗೆ ಪಾತ್ರರಾದ ಜನ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.