AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೋಟದ ಮನೆಯಲ್ಲಿ ಮಹಿಳೆಯ ಕತ್ತು ಸೀಳಿ ಬರ್ಬರ ಹತ್ಯೆ:ಸ್ಥಳೀಯ ವ್ಯಕ್ತಿ ಹೇಳಿದ್ದೇನು ಗೊತ್ತಾ?

ತೋಟದ ಮನೆಯಲ್ಲಿ ಮಹಿಳೆಯ ಕತ್ತು ಸೀಳಿ ಬರ್ಬರ ಹತ್ಯೆ:ಸ್ಥಳೀಯ ವ್ಯಕ್ತಿ ಹೇಳಿದ್ದೇನು ಗೊತ್ತಾ?

Jagadisha B
| Updated By: ರಮೇಶ್ ಬಿ. ಜವಳಗೇರಾ|

Updated on: Dec 01, 2025 | 10:46 PM

Share

ತೋಟದ ಮನೆಯಲ್ಲಿ ಮಹಿಳೆಯ ಕತ್ತು ಸೀಳಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಹಿಂಡಸಗೆರೆ ಗ್ರಾಮದಲ್ಲಿ ನಡೆದಿದೆ. ಪತಿ ನಿಧನ ನಂತರ ಮಂಜುಳಾ ಮಗನ ಜೊತೆ ತೋಟದ ಮನೆಯಲ್ಲಿ ವಾಸವಿದ್ದಳು. ಆದ್ರೆ, ಮಗ ಪತ್ನಿ ಮನೆಗೆ ಹೋಗಿದ್ದಾಗ ದುಷ್ಕರ್ಮಿಗಳು, ತೋಟದ ಮನೆಯೊಳಗೆ ನುಗ್ಗಿ ಒಂಟಿಯಾಗಿದ್ದ ಮಂಜುಳಾನನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ತುಮಕೂರು, (ಡಿಸೆಂಬರ್01): ತೋಟದ ಮನೆಯಲ್ಲಿ ಮಹಿಳೆಯ ಕತ್ತು ಸೀಳಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಹಿಂಡಸಗೆರೆ ಗ್ರಾಮದಲ್ಲಿ ನಡೆದಿದೆ. ಪತಿ ನಿಧನ ನಂತರ ಮಂಜುಳಾ ಮಗನ ಜೊತೆ ತೋಟದ ಮನೆಯಲ್ಲಿ ವಾಸವಿದ್ದಳು. ಆದ್ರೆ, ಮಗ ಪತ್ನಿ ಮನೆಗೆ ಹೋಗಿದ್ದಾಗ ದುಷ್ಕರ್ಮಿಗಳು, ತೋಟದ ಮನೆಯೊಳಗೆ ನುಗ್ಗಿ ಒಂಟಿಯಾಗಿದ್ದ ಮಂಜುಳಾನನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಮಗ ಸೊಸೆ ಇಲ್ಲದನ್ನು ನೋಡಿಯೇ ನಿನ್ನೆ(ನವೆಂಬರ್ 30) ಮನೆಗೆ ನುಗ್ಗಿ ಹತ್ಯೆ ಮಾಡಲಾಗಿದ್ದು, ಇಂದು (ಡಿಸೆಂಬರ್ 01) ಬೆಳಗ್ಗೆ ಮೈದುನ ತೋಟದ ಮನೆ ಬಳಿ ತೆರಳಿದಾಗ ಮಂಜುಳಾ ಕೊಲೆಯಾಗಿ ಬಿದ್ದಿರುವುದು ಬೆಳಕಿಗೆ ಬಂದಿದೆ. ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ .ಎಸ್.ಪುರ ಠಾಣೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.