ಇಲಿ ಆಯ್ತು ಈಗ ವಿ‌ಧಾನಸೌಧದಲ್ಲಿ ಹಾವು: ಬೆಚ್ಚಿಬಿದ್ದ ಪತ್ರಗಾರ ಇಲಾಖೆ ಸಿಬ್ಬಂದಿ

Edited By:

Updated on: Jul 20, 2023 | 12:44 PM

ವಿಧಾನಸೌಧದಲ್ಲಿ ಇಲಿ ಆಯ್ತು ಇದೀಗ ಹಾವು ಕಾಣಿಸಿಕೊಂಡಿದೆ. ಹೌದು ವಿಧಾನಸಭೆ ಅಧಿವೇಶನದ ನಡೆಯುತ್ತಿದ್ದು, ಈ ಮಧ್ಯೆ ವಿಧಾನಸೌಧದ ಸರ್ಕಾರದ ಮಹತ್ವದ ಹಳೆಯ ದಾಖಲೆಗಳಿರುವ ಕೊಠಡಿಗೆ ಹಾವೊಂದು ಎಂಟ್ರಿ ಕೊಟ್ಟಿದೆ.

ಬೆಂಗಳೂರು: ವಿಧಾನಸೌಧದಲ್ಲಿ ಇಲಿ ಆಯ್ತು ಇದೀಗ ಹಾವು(Snake) ಕಾಣಿಸಿಕೊಂಡಿದೆ. ಹೌದು ವಿಧಾನಸಭೆ ಅಧಿವೇಶನದ ನಡೆಯುತ್ತಿದ್ದು, ಈ ಮಧ್ಯೆ ವಿಧಾನಸೌಧ(Vidhana Soudha)ದ ಸರ್ಕಾರದ ಮಹತ್ವದ ಹಳೆಯ ದಾಖಲೆಗಳಿರುವ ಕೊಠಡಿಗೆ ಹಾವೊಂದು ಎಂಟ್ರಿ ಕೊಟ್ಟಿದೆ. ಹಾವನ್ನು ನೋಡುತ್ತಿದ್ದಂತೆ ಪತ್ರಗಾರ ಇಲಾಖೆ ಸಿಬ್ಬಂದಿಗಳು ಆತಂಕಗೊಂಡಿದ್ದು, ಕೂಡಲೇ ಉರಗ ರಕ್ಷಕರನ್ನು ಕರೆಸಿದ ವಿಧಾನಸೌಧದ ಸಿಬ್ಬಂದಿಗಳು, ಹಾವು ಹಿಡಿಸಿದ್ದಾರೆ. ಇನ್ನು ವಿಧಾನಸೌಧದಲ್ಲಿ ಇಲಿಗಳು ಹೆಚ್ಚಾಗಿವೆ, ಹೀಗಾಗಿಯೇ ಹಾವುಗಳ ಕಾಟ ಕೂಡ ಹೆಚ್ಚಳವಾಗಿದೆಯೆಂದು ಸಿಬ್ಬಂದಿಗಳು ಹೇಳುತ್ತಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More