ಉಡುಪಿಯಲ್ಲಿ ಜೀವಂತ ನಾಗರ ಹಾವಿಗೆ ಪೂಜೆ ಸಲ್ಲಿಸುವ ಮೂಲಕ ವಿಶೇಷ ನಾಗ ಪಂಚಮಿ ಆಚರಣೆ

Updated on: Aug 09, 2024 | 6:30 PM

ನಾಗರಪಂಚಮಿಯ ದಿನವಾದ ಇಂದು ಜೀವಂತ ನಾಗರ ಹಾವಿಗೆ ಪೂಜಿ ಸಲ್ಲಿಸಿದ ಅಚ್ಚರಿ ಘಟನೆ ಉಡುಪಿ ಜಿಲ್ಲೆಯ ಸಾಲಿಗ್ರಾಮ (shaligram)ದಲ್ಲಿ ನಡೆದಿದೆ. ಉರಗ ರಕ್ಷಕ ಸುಧೀಂದ್ರ ಐತಾಳರು ಎಂಬುವವರು ವರ್ಷಂಪ್ರತಿ ಜೀವಂತ ನಾಗನಿಗೆ ಪೂಜೆ ಸಲ್ಲಿಸುತ್ತಾ ಬಂದಿದ್ದಾರೆ.

ಉಡುಪಿ, ಆ.09: ಜಿಲ್ಲೆಯ ಸಾಲಿಗ್ರಾಮ(shaligram)ದಲ್ಲಿ ಉರಗ ರಕ್ಷಕ ಸುಧೀಂದ್ರ ಐತಾಳರು ನಾಗರಪಂಚಮಿಯ ದಿನವಾದ ಇಂದು ಜೀವಂತ ನಾಗರ ಹಾವಿಗೆ ಪೂಜಿ ಸಲ್ಲಿಸಿದ್ದಾರೆ. ವರ್ಷಂಪ್ರತಿ ಐತಾಳರು ಜೀವಂತ ನಾಗನಿಗೆ ಪೂಜೆ ಸಲ್ಲಿಸಿ ಸುದ್ದಿಯಲ್ಲಿರುತ್ತಾರೆ. ಹಾಗಂತ ಇದು ಇವತ್ತು ನಿನ್ನೆಯಿಂದ ನಡೆದುಕೊಂಡು ಬಂದ ಪದ್ದತಿಯಲ್ಲ. ಐತಾಳರು ಕಳೆದ 40 ವರ್ಷಗಳಿಂದಲೂ ಉರಗ ರಕ್ಷಣೆಯ ಕಾರ್ಯ ಮಾಡುತ್ತಿದ್ದಾರೆ. ಹಾಗೆ ನೋಡಿದರೆ ಪ್ರತಿನಿತ್ಯ ಅವರು ಜೀವಂತ ಹಾವುಗಳಿಗೆ ಪೂಜೆ ಮಾಡುತ್ತಾ ಬಂದಿದ್ದಾರೆ. ಗಾಯಗೊಂಡ ಹಾವು, ಆಶ್ರಯ ಇಲ್ಲದ ಹಾವು, ಬೇರ್ಪಟ್ಟ ಹಾವಿನ ಮರಿಗಳು, ಅಪಘಾತದಲ್ಲಿ ಗಾಯಗೊಂಡ ಹಾವು. ಹೀಗೆ ಎಲ್ಲೇ ಹಾವುಗಳು ಕಂಡರೂ ಅವರು ತಮ್ಮ ಮನೆಗೆ ತಂದು ಅದರ ಆರೈಕೆ ಮಾಡುತ್ತಾರೆ. ಕಳೆದ 40 ವರ್ಷಗಳಿಂದ ಅವರು ಇದೇ ಕಾಯಕ ಮಾಡುತ್ತಿದ್ದಾರೆ. ಹಾಗಾಗಿ ಅವರ ಮನೆಯಲ್ಲಿ ಹಾವಿಗೆ ನಿತ್ಯವೂ ಪೂಜೆ ನಡೆಯುತ್ತಿರುತ್ತದೆ. ಇವತ್ತು ನಾಗರಪಂಚಮಿಯ ಪ್ರಯುಕ್ತ ವಿಶೇಷ ರೀತಿಯಲ್ಲಿ ನಾಗರಾಧನೆ ಮಾಡಿ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

Read More