ಬೆಂಗಳೂರುನಿಂದ ಅಯೋಧ್ಯೆಗೆ ಹೊರಟಿತು ಮೊದಲ ರೈಲು, ಬಾಲರಾಮನ ದರ್ಶನ ಮಾಡಲಿದ್ದಾರೆ 1,450 ಬಿಜೆಪಿ ಕಾರ್ಯಕರ್ತರು

ನಗರದ ಮೂರು ಲೋಕಸಭಾ ಕ್ಷೇತ್ರಗಳ ಸುಮಾರು 1,450 ಬಿಜೆಪಿ ಕಾರ್ಯಕರ್ತರು ಬಾಲರಾಮನ ದರ್ಶನಕ್ಕೆ ತೆರಳಿದ್ದಾರೆ. ನಮಗೆಲ್ಲ ಗೊತ್ತಿರುವ ಹಾಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಜನವರಿ 22ರಂದು ರಾಮಮಂದಿರದ ಪ್ರಾಣ ಪ್ರತಿಷ್ಠೆ ನೆರವೇರಿಸಿದ್ದರು. ಅಲ್ಲಿಂದ ಇವತ್ತಿನವರೆಗೆ ಸುಮಾರು 40 ಕೋಟಿಗೂ ಹೆಚ್ಚು ಜನ ಅಯೋಧ್ಯೆಗೆ ತೆರಳಿ ರಾಮಲಲ್ಲಾನ ದರ್ಶನ ಮಾಡಿದ್ದಾರೆ.

ಬೆಂಗಳೂರು: ನಗರದ ಮೂರು ಲೋಕಸಭಾ ಕ್ಷೇತ್ರಗಳ (Lok Sabha constituencies) ಬಿಜೆಪಿ ಕಾರ್ಯಕರ್ತರನ್ನು ಹೊತ್ತ ವಿಶೇಷ ರೈಲೊಂದು ಬುಧವಾರ ಬೆಳಗಿನ ಜಾವ 3.40ಕ್ಕೆ ನಗರದ ವಿಶ್ವೇಶ್ವರಯ್ಯ ವಿಮಾನ ನಿಲ್ದಾಣದಿಂದ ರಾಮನ ಊರು ಅಯೋಧ್ಯೆಗೆ (Ayodhya) ತೆರಳಿತು. ರೇಲ್ವೇ ಇಲಾಖೆ ಮೂಲಗಳ ಪ್ರಕಾರ ಟ್ರೈನು ಫೆಬ್ರುವರಿ 16, ಮಧ್ಯಾಹ್ನದ ಸಮಯ ಪವಿತ್ರ ನಗರಿಯ ಅಯೋಧ್ಯೆ ಧಾಮ ತಲುಪಲಿದೆ. ಮರುದಿನ ಬೆಳಗ್ಗೆ ಅಂದರೆ ಫೆಬ್ರುವರಿ 17 ಬೆಳಗ್ಗೆ ಅಯೋಧ್ಯೆ ಧಾಮದಿಂದ ವಾಪಸ್ಸು ಬರುವ ಇದೇ ರೈಲು ಫೆಬ್ರುವರಿ 20 ಬೆಳಗ್ಗೆ ಬೆಂಗಳೂರು ನಗರ ತಲುಪಲಿದೆ. ಬೆಂಗಳೂರು ಕೇಂದ್ರ ಕ್ಷೇತ್ರದ ಬಿಜೆಪಿನ ಸಂಸದ ಪಿಸಿ ಮೋಹನ್ (PC Mohan) ವಿಶೇಷ ರೈಲಿಗೆ ಚಾಲನೆ ನೀಡಿದರು. ನಗರದ ಮೂರು ಲೋಕಸಭಾ ಕ್ಷೇತ್ರಗಳ ಸುಮಾರು 1,450 ಬಿಜೆಪಿ ಕಾರ್ಯಕರ್ತರು ಬಾಲರಾಮನ ದರ್ಶನಕ್ಕೆ ತೆರಳಿದ್ದಾರೆ. ನಮಗೆಲ್ಲ ಗೊತ್ತಿರುವ ಹಾಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಜನವರಿ 22ರಂದು ರಾಮಮಂದಿರದ ಪ್ರಾಣ ಪ್ರತಿಷ್ಠೆ ನೆರವೇರಿಸಿದ್ದರು. ಅಲ್ಲಿಂದ ಇವತ್ತಿನವರೆಗೆ ಸುಮಾರು 40 ಕೋಟಿಗೂ ಹೆಚ್ಚು ಜನ ಅಯೋಧ್ಯೆಗೆ ತೆರಳಿ ರಾಮಲಲ್ಲಾನ ದರ್ಶನ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Follow Us