ನೂಪುರ್ ಶರ್ಮರನ್ನು ಬೆಂಬಲಿಸಿದವನ ಶಿರಚ್ಛೇದ ಮಾಡಲಾಗುತ್ತದೆ ಅಂದರೆ ನಾವೇನು ತಾಲಿಬಾನ್​​​ನಲ್ಲಿ ವಾಸವಾಗಿದ್ದೇವಾ? ಸಿಟಿ ರವಿ

ಅರುಣ್​ ಕುಮಾರ್​ ಬೆಳ್ಳಿ

Updated on: Jun 29, 2022 | 1:11 PM

ನೂಪುರ್ ಹೇಳಿಕೆಯನ್ನು ಬೆಂಬಲಿಸಿದ ರಾಜಸ್ತಾನದ ಟೇಲರೊಬ್ಬರನ್ನು ಶಿರಚ್ಛೇದ ಮಾಡಿರುವುದನ್ನು ಉಗ್ರವಾಗಿ ಖಂಡಿಸಿದ ರವಿ, ನಾವೇನು ತಾಲಿಬಾನಲ್ಲಿ ವಾಸವಾಗಿದ್ದೇವಾ? ಎಂದು ಕೋಪದಿಂದ ಪ್ರಶ್ನಿಸಿದರು.

New Delhi:  ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ (Ct Ravi) ಅವರು ಬುಧವಾರ ದೆಹಲಿಯಲ್ಲಿ ಮಾತಾಡುವಾಗ ಪತ್ರಕರ್ತರ ಕೆಲ ಪ್ರಶ್ನೆಗಳಿಗೆ ಸಮರ್ಪಕವಾಗಿ ಉತ್ತರಿಸಲಾಗದೆ, ಮಾಧ್ಯಮವರು ಸೃಷ್ಟಿಕರ್ತರು ಅಂತ ಹೇಳಿ ಅವರ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದರು. ಪಕ್ಷದ ಉಚ್ಚಾಟಿತ ವಕ್ತಾರೆ ನೂಪುರ್ ಶರ್ಮ (Nupur Sharma) ಅವರನ್ನು ವಹಿಸಿಕೊಂಡು ಮಾತಾಡುವ ಭರದಲ್ಲ್ಲಿ ಜಾಕಿರ್ ನಾಯಕ್ (Zakir Naik) ಮತ್ತು ಇನ್ನೂ ಅನೇಕರು ಪ್ರವಾದಿಯವರ ಬಗ್ಗೆ ಮಾತಾಡಿದ್ದಾರೆ ಎಂದು ರವಿಯವರು ಹೇಳಿದರು. ನೂಪುರ್ ಹೇಳಿಕೆಯನ್ನು ಬೆಂಬಲಿಸಿದ ರಾಜಸ್ತಾನದ ಟೇಲರೊಬ್ಬರನ್ನು ಶಿರಚ್ಛೇದ ಮಾಡಿರುವುದನ್ನು ಉಗ್ರವಾಗಿ ಖಂಡಿಸಿದ ರವಿ, ನಾವೇನು ತಾಲಿಬಾನಲ್ಲಿ ವಾಸವಾಗಿದ್ದೇವಾ? ಎಂದು ಕೋಪದಿಂದ ಪ್ರಶ್ನಿಸಿದರು.

ಇದನ್ನೂ ಓದಿ:  Viral Video: ಜೋರ್ಡಾನ್​​ನ ಬಂದರಿನಲ್ಲಿ ವಿಷಾನಿಲ ಸೋರಿಕೆ; 12 ಜನ ಸಾವು, 250ಕ್ಕೂ ಹೆಚ್ಚು ಮಂದಿಗೆ ಗಾಯ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.