Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾದ ತಮಿಳುನಾಡು ಸರ್ಕಾರದ ನಿಯೋಗ

ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾದ ತಮಿಳುನಾಡು ಸರ್ಕಾರದ ನಿಯೋಗ

ಅರುಣ್​ ಕುಮಾರ್​ ಬೆಳ್ಳಿ
|

Updated on: Mar 12, 2025 | 5:11 PM

ಶಿವಕುಮಾರ್ ನೀಡಿದ ಹೇಳಿಕೆಯ ಪ್ರಕಾರ ಕೇಂದ್ರ ಸರ್ಕಾರವು ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡನೆ ಮಾಡಿ ಸಂಸತ್ತಿನಲ್ಲಿ ದಕ್ಷಿಣ ಭಾರತದ ಪ್ರಾತಿನಿಧ್ಯ ಕಮ್ಮಿ ಮಾಡುವ ಮತ್ತು ಹಿಂದಿ ಭಾಷೆ ಹೇರಿಕೆಗೆ ಯತ್ನಿಸುತ್ತಿದೆ. ಕೇಂದ್ರ ಸರ್ಕಾರದ ನಡೆಗಳನ್ನು ವಿರೋಧಿಸಲು ತಮಿಳುನಾಡು ಸರ್ಕಾರ ಮಾರ್ಚ್​ 22ರಂದು ಸಭೆಯೊಂದನ್ನು ನಡೆಸುವ ನಿರ್ಧಾರ ಮಾಡಿದ್ದು ಅದರಲ್ಲಿ ಭಾಗವಹಿಸುವಂತೆ ಆಮಂತ್ರಣ ನೀಡಲು ನಿಯೋಗ ಆಗಮಿಸಿತ್ತು.

ಬೆಂಗಳೂರು, ಮಾರ್ಚ್ 12: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಇಂದು ಅನಿರೀಕ್ಷಿತ ಅತಿಥಿಗಳ ಆಗಮನವಾಯಿತು. ತಮಿಳುನಾಡು ಅರಣ್ಯ ಸಚಿವ ಡಾ ಕೆ ಪೊನ್ನುಮುಡಿ (Dr K Ponnumudi) ಮತ್ತು ರಾಜ್ಯಸಭಾ ಸದಸ್ಯ ಮೊಹಮ್ಮದ್ ಅಬ್ದುಲ್ಲಾ ಇಸ್ಮಾಯಿಲ್ ನೇತೃತ್ವದ ನಿಯೋಗವೊಂದು ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಸತ್ಕರಿಸಿತು. ಈ ಸಂದರ್ಭದಲ್ಲಿ ತಮಿಳುನಾಡು ಗಣ್ಯರು ಸಿದ್ದರಾಮಯ್ಯನವರಿಗೆ ಶಾಲು ಹೊದೆಸಿ ಸನ್ಮಾನಿದರಲ್ಲದೆ ಸ್ಮರಾಣಾರ್ಥವಾಗಿ ಕೆಲವು ಪುಸ್ತಗಳನ್ನು ನೀಡಿದರು. ನಿಯೋಗವು ಸಿಎಂ ನಂತರ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನೂ ಭೇಟಿಯಾಯಿತು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ನಟಿ ಶಬಾನಾ ಆಜ್ಮಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದ ಸಿದ್ದರಾಮಯ್ಯ