ವಿಜಯಪುರ: ಮೊಹರಂ ವೇಳೆ ವಿಶಿಷ್ಟ ಆಚರಣೆ, ಸೀರೆ ತೊಟ್ಟ ಪುರುಷರು ನುಡಿತಾರೆ ಮಳೆ, ಬೆಳೆಯ ಭವಿಷ್ಯ

Edited By: ಆಯೇಷಾ ಬಾನು

Updated on: Jul 18, 2024 | 12:47 PM

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಹಡಗಲಿ ಗ್ರಾಮದಲ್ಲಿ ಮೊಹರಂ ಹಬ್ಬದ ವೇಳೆ ಮಳೆ, ಬೆಳೆಗಳ ಭವಿಷ್ಯ ಕೇಳುವ ವಿಶಿಷ್ಟ ಆಚರಣೆ ಇಲ್ಲಿ ನಡೆದಿದೆ. ಇಲ್ಲಿ ಪುರುಷರು ಸೀರೆಯುಟ್ಟು ಮಳೆ, ಬೆಳೆಗಳ ಭವಿಷ್ಯ ಕೇಳುವ ಪದ್ದತಿ ರೂಢಿಯಲ್ಲಿದೆ. ಈ ಭವಿಷ್ಯದ ಆಧಾರದ ಮೇಲೆ ಈ ಭಾಗದ ರೈತರು ಬೆಳೆಗಳ ಬಿತ್ತನೆ ಮಾಡುತ್ತಾರೆ.

ವಿಜಯಪುರ, ಜುಲೈ.18: ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರುವ ಮೊಹರಂ ಹಬ್ಬ (Muharram) ಆಚರಣೆಯು ಎಲ್ಲೆಡೆ ಸಂಭ್ರಮ ಸಡಗರದಿಂದ ನಡೆಯುತ್ತಿದೆ. ಅದರಲ್ಲೂ ವಿಜಯಪುರ (Vijayapura) ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಹಡಗಲಿ ಗ್ರಾಮದಲ್ಲಿ ಈ ಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಗಿದೆ. ಮೊಹರಂ ಹಬ್ಬದ ವೇಳೆ ಮಳೆ, ಬೆಳೆಗಳ ಭವಿಷ್ಯ ಕೇಳುವ ವಿಶಿಷ್ಟ ಆಚರಣೆ ಇಲ್ಲಿ ನಡೆದಿದೆ. ಇಲ್ಲಿ ಪುರುಷರು ಸೀರೆಯುಟ್ಟು ಮಳೆ, ಬೆಳೆಗಳ ಭವಿಷ್ಯ ಕೇಳುವ ಪದ್ದತಿ ರೂಢಿಯಲ್ಲಿದೆ.

ಅನಾದಿ ಕಾಲದಿಂದಲೂ ಮೊಹರಂ ಜಾಗರಣೆ ವೇಳೆ ಭವಿಷ್ಯ ಕೇಳುವ ಆಚರಣೆಯನ್ನು ಇಲ್ಲಿನ ಜನ ಮಾಡಿಕೊಂಡು ಬಂದಿದ್ದಾರೆ. ಓರ್ವ ವ್ಯಕ್ತಿಯನ್ನು ಬುಟ್ಟಿಯಲ್ಲಿ ಕೂರಿಸಲಾಗುತ್ತೆ. ಬಳಿಕ ಸೀರೆಯುಟ್ಟ ಪುರುಷರು ಬುಟ್ಟಿಯೊಳಗೆ ಒನಕೆಯನ್ನು ಇಟ್ಟು ವ್ಯಕ್ತಿಯ ಸಮೇತ ಬುಟ್ಟಿಯನ್ನು ಮೇಲೆತ್ತುತ್ತಾರೆ. ಮೇಲೆತ್ತಿ ಕೆಳಗಿಳಿಸಿ ಭವಿಷ್ಯ ನುಡಿಯುತ್ತಾರೆ. ಮಳೆ, ಬೆಳೆಗಳ ಹೆಸರಿನಲ್ಲಿ ಬುಟ್ಟಿಯನ್ನು ಮೇಲೆತ್ತಲಾಗುತ್ತೆ. ವ್ಯಕ್ತಿ ಕುಳಿತಿರುವ ಬುಟ್ಟಿ ಸುಲಭವಾಗಿ ಮೇಲೆ ಎತ್ತಲಾದರೆ ಮಳೆ ಬೆಳೆ ಉತ್ತಮವಾಗಿ ಆಗುತ್ತೆ ಎಂದು ಅರ್ಥ. ಬುಟ್ಟಿ ಮೇಲೆತ್ತಲು ಕಷ್ಟವಾದರೆ ಮಳೆ ಬೆಳೆ ಸರಿಯಾಗಿ ಆಗಲ್ಲಾ ಎಂದು ಅರ್ಥ. ಈ ಭವಿಷ್ಯದ ಆಧಾರದ ಮೇಲೆ ಈ ಭಾಗದ ರೈತರು ಬೆಳೆಗಳ ಬಿತ್ತನೆ ಮಾಡುತ್ತಾರೆ. ನಿನ್ನೆ ತಡರಾತ್ರಿ ಈ ವಿಶೇಷ ಪದ್ದತಿಯ ಆಚರಣೆ ನಡೆದಿದ್ದು ಇಲ್ಲಿನ ಜನರು ಇದನ್ನು ನಂಬುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More