ಬೈ ಎಲೆಕ್ಷನ್ ಸೋಲು: TV ರಸ್ತೆಗೆ ಎಸೆದು ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಬಿಜೆಪಿ ಕಾರ್ಯಕರ್ತ

Edited By:

Updated on: Nov 23, 2024 | 5:44 PM

ತೀವ್ರ ಕುತೂಹಲ ಮೂಡಿಸಿದ್ದ ಕರ್ನಾಟಕದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಎಲ್ಲಾ ಮೂರು ಕ್ಷೇತ್ರಗಳಲ್ಲೂ ಆಡಳಿತರೂಢ ಕಾಂಗ್ರೆಸ್ ಗೆಲುವು ಸಾಧಿಸಿದೆ. ಇದರಿಂದ ಎನ್​ಡಿಎಗೆ ಮುಖಭಂಗವಾಗಿದೆ. ಇನ್ನು ಸೋಲಿನಿಂದ ರೊಚ್ಚಿಗೆದ್ದಿರುವ ಬಿಜೆಪಿ ಹಿರಿಯ ಕಾರ್ಯಕರ್ತ ಟಿವಿ ಹೊಡೆದು ಹಾಕಿ ನಾಯಕರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

ವಿಜಯಪುರ, (ನವೆಂಬರ್ 23): ಕರ್ನಾಟಕದ ಮೂರು ಉಪಚುನಾವಣೆಯಲ್ಲಿ ಎನ್​ಡಿಎ(ಬಿಜೆಪಿ-ಜೆಡಿಎಸ್​) ಸೋಲು ಕಂಡಿದೆ. ಹೀಗಾಗಿ ನಾಯಕರಿಗೆ ತೀವ್ರ ಮುಖಭಂಗವಾಗಿದೆ. ಈ ಸೋಲಿನಿಂದಾಗಿ ಬಿಜೆಪಿ ಹಿರಿಯ ಕಾರ್ಯಕರ್ತ ಟಿವಿ ಹೊಡೆದು ಹಾಕಿದ್ದಾರೆ. ವಿಜಯಪುರ ಜಿಲ್ಲೆ ಕೋಲ್ಹಾರ ಪಟ್ಟಣದ ಬಿಜೆಪಿ ಅಭಿಮಾನಿ ವೀರಭದ್ರಪ್ಪ ಅವರು ಉಪಚುನಾವಣೆ ಸೋಲಿನಿಂದಾಗಿ ಮನೆಯಲ್ಲಿದ್ದ ಟಿವಿಯನ್ನು ಹೊರಗೆ ತಂದು ರಸ್ತೆಗೆ ಎಸೆದಿದ್ದಾರೆ. ಬಳಿಕ ಟಿವಿಗೆ ಕಲ್ಲಿನಿಂದ ಒಡೆದು ಆಕ್ರೋಶ ಹೊರಹಾಕಿದ್ದಾರೆ. ಇನ್ನು ಇದೇ ವೇಳೆ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ಟಿವಿ ಒಡೆದ ಬಳಿಕ ಮಾತನಾಡಿರುವ ವೀರಭದ್ರಪ್ಪ. ಪ್ರಧಾನಿ ಮೋದಿ ಅವರು ರಾಜ್ಯದ ಬಿಜೆಪಿ ಮುಖಂಡರ ಸಭೆ ತೆಗೆದುಕೊಳ್ಳಬೇಕು. ರಾಜ್ಯ ಬಿಜೆಪಿಯಲ್ಲಿ ಒಗ್ಗಟ್ಟಿಲ್ಲದ ಕಾರಣ ಕಾರ್ಯಕರ್ತರು ಬಲಿಪಶುವಾಗುತ್ತಿದ್ದಾರೆ. ಬಿಜೆಪಿಯಲ್ಲಿನ ಎಲ್ಲಾ ನಾಯಕರು ಒಕ್ಕಟ್ಟಾಗಬೇಕಿದೆ. ಇಲ್ಲಂದರೆ ಲೀಡರ್ ಗಳ ಕೈಲಿ ಕಾರ್ಯಕರ್ತರು ಸಿಕ್ಕು ಬಲಿಯಾಗುತ್ತಾರೆ. ಬಸವನಗೌಡ ಪಾಟೀಲ್ ಯತ್ನಾಳ ಒಂದು ಕಡೆ ವಿಜಯೇಂದ್ರ ಒಂದು ಕಡೆ ಹೋಗುತ್ತಾರೆ. ಇವರನ್ನೇ ಮೂರ್ನಾಲ್ಕು ಭಾಗವಾದರೆ ಹೇಗೆ ಎಂದು ಬಿಜೆಪಿ ನಾಯಕರನ್ನು ಪ್ರಶ್ನಿಸಿದ್ದಾರೆ.

Published on: Nov 23, 2024 04:19 PM
Follow Us
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More