ಕೇವಲ 22 ದಿನಗಳಲ್ಲಿ ಮಂತ್ರಾಲಯ ರಾಯರ ಮಠಕ್ಕೆ ಭಕ್ತರಿಂದ ಹರಿದು ಬಂದ ಕಾಣಿಕೆಯ ಮೊತ್ತ ರೂ. 2.35 ಕೋಟಿ!

ಮಂತ್ರಾಲಯದ ರಾಯರ ಮಠದಲ್ಲಿನ ಕಾಣಿಕೆ ಹುಂಡಿಗಳನ್ನು ತೆರೆಯಲಾಗಿದ್ದು ಮಠದ ಸಿಬ್ಬಂದಿಯಿಂದ ಹಣದ ಎಣಿಕೆಯೂ ಆಗಿದೆ. ಭಕ್ತರು ಹಾಕಿರುವ ಕಾಣಿಕೆಗಳಲ್ಲಿ 5 ಲಕ್ಷ ರೂ. ಮೌಲ್ಯದ ನಾಣ್ಯಗಳಿವೆ! ಹಣ ಎಣಿಕೆ ಕಾರ್ಯ ಮಠದ ಸಿಬ್ಬಂದಿಯಿಂದ ಸುಮಾರು 8 ಗಂಟೆಗಳ ಕಾಲ ನಡೆದಿದೆ ಎಂದು ರಾಘವೇಂದ್ರಸ್ವಾಮಿ ಮಠದ ಮೂಲಗಳಿಂದ ಗೊತ್ತಾಗಿದೆ.

ಕೇವಲ 22 ದಿನಗಳಲ್ಲಿ ಮಂತ್ರಾಲಯ ರಾಯರ ಮಠಕ್ಕೆ ಭಕ್ತರಿಂದ ಹರಿದು ಬಂದ ಕಾಣಿಕೆಯ ಮೊತ್ತ ರೂ. 2.35 ಕೋಟಿ!
|

Updated on: Aug 24, 2023 | 11:21 AM

ರಾಯಚೂರು: ದೇವಸ್ಥಾನ ಮತ್ತು ಮಠಮಾನ್ಯಗಳಲ್ಲಿ ಬಡವ ಬಲ್ಲಿದನೆಂಬ ತಾರತಮ್ಯವಿಲ್ಲ, ದೇವರು ಜನರ ಭಕ್ತಿಯನ್ನು ಮಾತ್ರ ಗಮನಿಸುತ್ತಾನೆ ಅವರ ಶ್ರೀಮಂತಿಕೆಯನ್ನಲ್ಲ ಅಂತ ಹಿರಿಯರು, ಬಲ್ಲವರು ಹೇಳುತ್ತಾರೆ. ಇದನ್ನು ಯಾಕೆ ಹೇಳಬೇಕಾಗಿದೆಯೆಂದರೆ ಮಂತ್ರಾಲಯದ ರಾಯರ ಮಠದಲ್ಲಿನ (Mantralayam Raghavendra Swamy Mutt) ಕಾಣಿಕೆ ಹುಂಡಿಗಳನ್ನು ತೆರೆಯಲಾಗಿದ್ದು ಮಠದ ಸಿಬ್ಬಂದಿಯಿಂದ (mutt staff) ಹಣದ ಎಣಿಕೆಯೂ ಆಗಿದೆ. ಭಕ್ತರು ಹಾಕಿರುವ ಕಾಣಿಕೆಗಳಲ್ಲಿ 5 ಲಕ್ಷ ರೂ. ಮೌಲ್ಯದ ನಾಣ್ಯಗಳಿವೆ! ಸ್ಥಿತಿವಂತರು (wealthy devotees) ಹೆಚ್ಚಿನ ಮುಖಬೆಲೆಯ ನೋಟು ಮತ್ತು ಚಿನ್ನ ಬೆಳ್ಳಿಯನ್ನು ಹುಂಡಿಗೆ ಹಾಕಿದರೆ, ಸ್ಥಿತಿವಂತರಲ್ಲದವರು ನಾಣ್ಯಗಳನ್ನು ಹಾಕುತ್ತಾರೆ. ಕಳೆದ 22 ದಿನಗಳ ಅವಧಿಯಲ್ಲಿ ಮಠದ ಹುಂಡಿಗಳಲ್ಲಿ ಸಂಗ್ರಹವಾಗಿರುವ ಹಣದ ಮೊತ್ತ ಎಷ್ಟು ಗೊತ್ತಾ? ನಾಣ್ಯಗಳೂ ಸೇರಿದಂತೆ ರೂ. 2.35 ಕೋಟಿ. ಅಷ್ಟು ಮಾತ್ರವಲ್ಲದೆ ಭಕ್ತರು 65 ಗ್ರಾಂ ಚಿನ್ನ ಮತ್ತು 85 ಗ್ರಾಂ ಬೆಳ್ಳಿಯ ಆಭರಣಗಳನ್ನೂ ಹುಂಡಿಗೆ ಹಾಕಿದ್ದಾರೆ. ಹಣ ಎಣಿಕೆ ಕಾರ್ಯ ಮಠದ ಸಿಬ್ಬಂದಿಯಿಂದ ಸುಮಾರು 8 ಗಂಟೆಗಳ ಕಾಲ ನಡೆದಿದೆ ಎಂದು ರಾಘವೇಂದ್ರಸ್ವಾಮಿ ಮಠದ ಮೂಲಗಳಿಂದ ಗೊತ್ತಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು