ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ, ಸಿಡಿದೆದ್ದ ಮೃತ ಸಂಬಂಧಿ
ಪತಿಯ ಅತಿಯಾದ ಅನುಮಾನ ಮತ್ತು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯೋರ್ವರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಹಾಸನದ ಹೆಚ್. ಮೈಲಳ್ಳಿ ಗ್ರಾಮದಲ್ಲಿ ನಡೆದಿದೆ. ಎಚ್. ಎಲ್. ಇಂದ್ರ (24) ಮೃತ ಮಹಿಳೆ. ಮದುವೆಯಾಗಿ ನಾಲ್ಕು ವರ್ಷಗಳಾಗಿದ್ದು, ಪತಿ ವರದಕ್ಷಿಣೆ ಹಾಗೂ ಹಣಕ್ಕಾಗಿ ಪೀಡಿಸುತ್ತಿದ್ದನೆನ್ನಲಾಗಿದೆ. ಈ ಸಂಬಂಧ ಪತಿ, ಅತ್ತೆ ಮತ್ತು ಅತ್ತಿಗೆ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ. ಇನ್ನು ಈ ಘಟನೆ ಬಗ್ಗೆ ಮೃತ ಇಂದ್ರ ಸಂಬಂಧಿಯೊಬ್ಬರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ನಾಲ್ವರು ವರ್ಷವಾದರೂ ಅವನಿಗೆ ಮಕ್ಕಳು ಮಾಡಿಕೊಳ್ಳಲು ಆಗಿಲ್ಲ. ಈಗ ಆ ಹುಡುಗಿನ ಅನ್ಯಾಯವಾಗಿ ಕೊಂದಿದ್ದಾರೆ. ಪೊಲೀಸರೇ ನ್ಯಾಯ ಕೊಡಿಬೇಕೆಂದು ಆಗ್ರಹಿಸಿದರು.
ಹಾಸನ, ಫೆಬ್ರವರಿ 01): ಪತಿಯ ಅತಿಯಾದ ಅನುಮಾನ ಮತ್ತು ವರದಕ್ಷಿಣೆ ಕಿರುಕುಳಕ್ಕೆ (Dowry harassment) ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯೋರ್ವರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಹಾಸನದ (Hassan) ಹೆಚ್. ಮೈಲಳ್ಳಿ ಗ್ರಾಮದಲ್ಲಿ ನಡೆದಿದೆ. ಎಚ್. ಎಲ್. ಇಂದ್ರ (24) ಮೃತ ಮಹಿಳೆ. ಮದುವೆಯಾಗಿ ನಾಲ್ಕು ವರ್ಷಗಳಾಗಿದ್ದು, ಪತಿ ವರದಕ್ಷಿಣೆ ಹಾಗೂ ಹಣಕ್ಕಾಗಿ ಪೀಡಿಸುತ್ತಿದ್ದನೆನ್ನಲಾಗಿದೆ. ಈ ಸಂಬಂಧ ಪತಿ, ಅತ್ತೆ ಮತ್ತು ಅತ್ತಿಗೆ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ. ಇನ್ನು ಈ ಘಟನೆ ಬಗ್ಗೆ ಮೃತ ಇಂದ್ರ ಸಂಬಂಧಿಯೊಬ್ಬರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಐದು ವರ್ಷವಾದರೂ ಅವನಿಗೆ ಮಕ್ಕಳು ಮಾಡಿಕೊಳ್ಳಲು ಆಗಿಲ್ಲ. ಈಗ ಆ ಹುಡುಗಿನ ಅನ್ಯಾಯವಾಗಿ ಕೊಂದಿದ್ದಾರೆ. ಪೊಲೀಸರೇ ಇದಕ್ಕೆ ನ್ಯಾಯ ಕೊಡಿಸಬೇಕೆಂದು ಆಗ್ರಹಿಸಿದರು.
Latest Videos

