ಮಹಿಳೆಯ ಮಾಂಗಲ್ಯ ಸರ ಕಳ್ಳತನಕ್ಕೆ ಯತ್ನಿಸಿದವನಿಗೆ ಗೂಸಾ; ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು

| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 28, 2023 | 8:53 AM

ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಹೆರೂರು ಗ್ರಾಮದಲ್ಲಿ ಮಹಿಳೆಯ ಮಾಂಗಲ್ಯ ಸರ ಕಳ್ಳತನ ಮಾಡಲು ಯತ್ನಿಸಿದ ವ್ಯಕ್ತಿಗೆ ಗ್ರಾಮಸ್ಥರೆಲ್ಲರೂ ಸೇರಿ ಕಂಬಕ್ಕೆ ಕಟ್ಟಿ ಹಿಗ್ಗಾ ಮುಗ್ಗಾ ಥಳಿಸಿದ ಘಟನೆ ನಡೆದಿದೆ.

ಕೊಪ್ಪಳ: ಮಹಿಳೆಯ ಮಾಂಗಲ್ಯ ಸರ ಕಳ್ಳತನ ಮಾಡಲು ಯತ್ನಿಸಿದ ವ್ಯಕ್ತಿಗೆ ಗ್ರಾಮಸ್ಥರೆಲ್ಲರೂ ಸೇರಿ ಕಂಬಕ್ಕೆ ಕಟ್ಟಿ ಹಿಗ್ಗಾ ಮುಗ್ಗಾ ಥಳಿಸಿದ ಘಟನೆ ಜಿಲ್ಲೆಯ ಗಂಗಾವತಿ(Gangavathi) ತಾಲ್ಲೂಕಿನ ಹೆರೂರು ಗ್ರಾಮದಲ್ಲಿ ನಡೆದಿದೆ. ಮಹಿಳೆಯು ಹೋಗುತ್ತಿದ್ದಾಗ ಬೈಕ್​ನಲ್ಲಿ ಇಬ್ಬರು ಯುವಕರು ಬಂದು ಮಾಂಗಲ್ಯ ಸರವನ್ನ ಖದೀಯಲು ಯತ್ನಿಸಿದ್ದಾರೆ. ಈ ವೇಳೆ ಗ್ರಾಮಸ್ಥರು ಸೇರಿ ಓರ್ವ ಆರೋಪಿ ಪವನ್ ಎಂಬಾತನನ್ನ ಸೆರೆ ಹಿಡಿದಿದ್ದು, ಇನ್ನೋರ್ವ ಆರೋಪಿ ಮಂಜು ಪರಾರಿಯಾಗಿದ್ದಾನೆ. ಸೆರೆ ಸಿಕ್ಕ ಆರೋಪಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಕುರಿತು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:48 am, Wed, 28 June 23

Follow us on