ಕೊಪ್ಪಳ: ಮಹಿಳೆಯ ಮಾಂಗಲ್ಯ ಸರ ಕಳ್ಳತನ ಮಾಡಲು ಯತ್ನಿಸಿದ ವ್ಯಕ್ತಿಗೆ ಗ್ರಾಮಸ್ಥರೆಲ್ಲರೂ ಸೇರಿ ಕಂಬಕ್ಕೆ ಕಟ್ಟಿ ಹಿಗ್ಗಾ ಮುಗ್ಗಾ ಥಳಿಸಿದ ಘಟನೆ ಜಿಲ್ಲೆಯ ಗಂಗಾವತಿ(Gangavathi) ತಾಲ್ಲೂಕಿನ ಹೆರೂರು ಗ್ರಾಮದಲ್ಲಿ ನಡೆದಿದೆ. ಮಹಿಳೆಯು ಹೋಗುತ್ತಿದ್ದಾಗ ಬೈಕ್ನಲ್ಲಿ ಇಬ್ಬರು ಯುವಕರು ಬಂದು ಮಾಂಗಲ್ಯ ಸರವನ್ನ ಖದೀಯಲು ಯತ್ನಿಸಿದ್ದಾರೆ. ಈ ವೇಳೆ ಗ್ರಾಮಸ್ಥರು ಸೇರಿ ಓರ್ವ ಆರೋಪಿ ಪವನ್ ಎಂಬಾತನನ್ನ ಸೆರೆ ಹಿಡಿದಿದ್ದು, ಇನ್ನೋರ್ವ ಆರೋಪಿ ಮಂಜು ಪರಾರಿಯಾಗಿದ್ದಾನೆ. ಸೆರೆ ಸಿಕ್ಕ ಆರೋಪಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಕುರಿತು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:48 am, Wed, 28 June 23