ಏಯ್‌.. ಏಯ್‌ ಅಂದ್ರೂ ಕೇಳದ ಯುವಕ ಸ್ಟೇಜ್​​​​ ಮೇಲೇರಿ ಸಿಎಂಗೆ ಹೇಳಿದ್ದೇನು ಗೊತ್ತಾ?

Edited By:

Updated on: Mar 13, 2026 | 6:54 PM

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು (ಮಾರ್ಚ್ 13) ತವರು ಕ್ಷೇತ್ರ ಮೈಸೂರಿನ ವರುಣಾಕ್ಕೆ ಭೇಟಿ ನೀಡಿದ್ದು, ಶ್ರೀ ಬೀರೇಶ್ವರ ಸ್ವಾಮಿ ದೇವಾಲಯದ ಸಂಪ್ರೋಕ್ಷಣ, ಪುನರ್ ಪ್ರತಿಷ್ಠಾಪನೆ, ಕುಂಭಾಭಿಷೇಕ ಹಾಗೂ ಮಹಾದ್ವಾರದ ಪೂಜಾ ಮಹೋತ್ಸವಕ್ಕೆ ಚಾಲನೆ ನೀಡಿದರು. ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪುತ್ರ ಯತೀಂದ್ರ ಸಿದ್ದರಾಮಯ್ಯನವರನ್ನು ಅದ್ಧೂರಿಯಾಗಿ ತೆರೆ ವಾಹನದಲ್ಲಿ ಮೆರವಣಿಗೆ ಮೂಲಕ ಬರಮಾಡಿಕೊಂಡರು. ಇನ್ನು ಸಿದ್ದರಾಮ್ಯಯ ಕಾರ್ಯಕ್ರಮದಲ್ಲಿ ಭಾಷಣ ಮಾಡುವ ವೇಳೆ ಯುವಕನೋರ್ವ ಏಕಾಏಕಿ ವೇದಿಕೆ ನುಗ್ಗಿದ್ದು, ನಮ್ಮ ಹುಡುಗರು ನಿಮ್ಮ ಜೊತೆ ಫೋಟೋ ತೆಗೆದುಕೊಳ್ಳಬೇಕೆಂದಿದ್ದಾರೆ. ಆದ್ದರಿಂದ ಸ್ವಲ್ಪ ಬಿಡುವು ಮಾಡಿಕೊಳ್ಳಿ ಎಂದು ಮನವಿ ಮಾಡಿದ್ದಾನೆ.

ಮೈಸೂರು, (ಮಾರ್ಚ್ 13): ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು (ಮಾರ್ಚ್ 13) ತವರು ಕ್ಷೇತ್ರ ಮೈಸೂರಿನ ವರುಣಾಕ್ಕೆ ಭೇಟಿ ನೀಡಿದ್ದು, ಶ್ರೀ ಬೀರೇಶ್ವರ ಸ್ವಾಮಿ ದೇವಾಲಯದ ಸಂಪ್ರೋಕ್ಷಣ, ಪುನರ್ ಪ್ರತಿಷ್ಠಾಪನೆ, ಕುಂಭಾಭಿಷೇಕ ಹಾಗೂ ಮಹಾದ್ವಾರದ ಪೂಜಾ ಮಹೋತ್ಸವಕ್ಕೆ ಚಾಲನೆ ನೀಡಿದರು. ಇದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪುತ್ರ ಯತೀಂದ್ರ ಸಿದ್ದರಾಮಯ್ಯನವರನ್ನು ಅದ್ಧೂರಿಯಾಗಿ ತೆರೆ ವಾಹನದಲ್ಲಿ ಮೆರವಣಿಗೆ ಮೂಲಕ ಬರಮಾಡಿಕೊಂಡರು.

ಇನ್ನು ಇದೇ ವೇಳೆ ಭದ್ರತಾಲೋಪವಾಗಿದೆ. ಸಿದ್ದರಾಮ್ಯಯ ಕಾರ್ಯಕ್ರಮದಲ್ಲಿ ಭಾಷಣ ಮಾಡುವ ವೇಳೆ ಯುವಕನೋರ್ವ ಏಕಾಏಕಿ ವೇದಿಕೆ ನುಗ್ಗಿದ್ದು, ನಮ್ಮ ಹುಡುಗರು ನಿಮ್ಮ ಜೊತೆ ಫೋಟೋ ತೆಗೆದುಕೊಳ್ಳಬೇಕೆಂದಿದ್ದಾರೆ. ಆದ್ದರಿಂದ ಸ್ವಲ್ಪ ಬಿಡುವು ಮಾಡಿಕೊಳ್ಳಿ ಎಂದು ಮನವಿ ಮಾಡಿದ್ದಾನೆ.

ಕರ್ನಾಟಕದ ಮ್ತತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 13, 2026 06:32 PM
Follow Us