ಮೋಹರಂ: ನಿಗಿ ನಿಗಿ ಕೆಂಡದ ಮೇಲೆ ಕಂಬಳಿ ಹಾಕಿ ಕುಳಿತ ಯುವಕ, ವಿಡಿಯೋ ನೋಡಿ

Edited By:

Updated on: Jul 15, 2024 | 5:10 PM

ಎಲ್ಲೆಡೆ ಮೊಹರಂ ಹಬ್ಬ ಸಂಭ್ರಮ ಮನೆ ಮಾಡಿದೆ. ಕೆಲವೆಡೆ ಹಿಂದೂ ಮುಸ್ಲಿಂ ಸೇರಿಕೊಂಡೇ ಈ ಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ. ಹಬ್ಬ ಆಚರಣೆ ವೇಳೆ ವಿವಿಧ ವಾದ್ಯಗಳಿಗೆ ಹೆಜ್ಜೆ ಹಾಕುತ್ತಾರೆ. ಅಲ್ಲದೇ ಕೆಲವರು ಹರಕೆ ಕಟ್ಟಿಕೊಂಡು ಕೆಂಡ ಹಾಯುತ್ತಾರೆ. ಅದರಂತೆ ವಿಜಯಪುರದಲ್ಲಿ ಯುವಕನೋರ್ವ ನಿಗಿ ನಿಗಿ ಕೆಂಡದಲ್ಲಿ ಕಂಬಳಿ ಹಾಸಿಕೊಂಡು ಪ್ರಾರ್ಥಿಸಿ ಹರಕೆ ತೀರಿಸಿದ್ದಾನೆ. ಇದೀಗ ಈ ವಿಡಿಯೋ ವೈರಲ್ ಆಗಿದೆ.

ವಿಜಯಪುರ (,ಜುಲೈ 15): ಮೊಹರಂ ಹಬ್ಬ ಹಿಂದೂ ಹಾಗೂ ಮುಸ್ಲಿಮರ ಭಾವೈಕ್ಯತೆಯನ್ನು ಸೂಚಿಸುವ ಹಬ್ಬವೆನ್ನಬಹುದು. ಈ ದಿನದಂದು ಇಮಾಮ್ ಹುಸೇನ್ ರ ತ್ಯಾಗವನ್ನು ನೆನಪಿಸಿಕೊಳ್ಳುವ ದಿನವಾಗಿದೆ. ತಮ್ಮ ಹಿರಿಯರ ತ್ಯಾಗ-ಹೋರಾಟಗಳನ್ನು ನೆನೆಯುವ ಉದ್ದೇಶದಿಂದ ಈ ಹಬ್ಬವು ಮಹತ್ವದ್ದಾಗಿದೆ. ಸುನ್ನಿ ಮುಸ್ಲಿಮರಿಗೆ, ಈ ತಿಂಗಳು ಇಸ್ಲಾಮಿಕ್ ಹೊಸ ವರ್ಷದ ಆರಂಭವಾಗಿದ್ದು, ಈ ಹಬ್ಬದಲ್ಲಿ ಹಲವರು ಹಲವು ರೀತಿಯಲ್ಲಿ ಹರಿಕೆ ತೀರಿಸುತ್ತಾರೆ. ಅದರಂತೆ ವಿಜಯಪುರ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಮದರಿ ಗ್ರಾಮದಲ್ಲಿ ಯುವಕನೋರ್ವ ನಿಗಿ ನಿಗಿ ಕೆಂಡದಲ್ಲಿ ಕಂಬಳಿ ಹಾಸಿಕೊಂಡು ಪ್ರಾರ್ಥಿಸಿದ್ದಾನೆ.

ಹೌದು…ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಮದರಿ ಗ್ರಾಮದಲ್ಲಿ ಮೊಹರಮ್ ಹಬ್ಬದ ಆಚರಣೆ ಸಂದರ್ಭದಲ್ಲಿ ಕೆಂಡ ಹಾಯುವ ಹರಕೆ ಕಟ್ಟಿರುತ್ತಾರೆ. ಅದರಲ್ಲೂ ಈ ಗ್ರಾಮದ ಯುವಕ ಯಲ್ಲಪ್ಪ, ಮೊಹರಂ ಹಬ್ಬದ ಗಂಧ ಅಚರಣೆಗಾಗಿ ಹಾಕಿದ್ದ ನಿಗಿ ನಿಗಿ ಕೆಂಡದ ಮೇಲೆ ಕಂಬಳಿ ಹಾಕಿ ನಮಸ್ಕಾರ ಮಾಡುವ ಮೂಲಕ ಪ್ರಾರ್ಥನೆ ಸಲ್ಲಿಸಿದ್ದಾನೆ ಕೆಂಡದ ಮೇಲೆ ಕಂಬಳಿ ಹಾಕಿ ನಮಸ್ಕಾರ ಮಾಡಿ ಮೇಲೆದ್ದರೂ ಸಹ ಯಲ್ಲಪ್ಪನಿಗೆ ಯಾವುದೇ ಗಾಯಗಳಾಗಿಲ್ಲ, ಇದನ್ನು ಗ್ರಾಮಸ್ಥರು ಅಲಾಯಿ ದೇವರ ಪವಾಡ ಎಂದು ನಂಬಿದ್ದು, ಪ್ರತಿ ವರ್ಷ ಇಂಥ ವಿಚಿತ್ರ ಹರಕೆ ತೀರಿಸುತ್ತಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More