AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?

ಭಾರಿ ಬೇಡಿಕೆ ಹೊಂದಿರುವ ಅರಿಜಿತ್ ಸಿಂಗ್ ಅವರು ನಿವೃತ್ತಿ ಘೋಷಿಸಿದ್ದು ಎಲ್ಲರಿಗೂ ಶಾಕ್ ಆಗಿದೆ. ಅವರ ಮನವೊಲಿಸಲು ಹಲವರು ಪ್ರಯತ್ನಿಸುತ್ತಿದ್ದಾರೆ. ಅವರ ಮನೆಗೆ ಆಮಿರ್ ಖಾನ್ ಭೇಟಿ ನೀಡಿದ್ದಾರೆ. ಈ ಭೇಟಿಗೆ ನಿಖರ ಕಾರಣ ಏನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಆದರೆ ಗಾಸಿಪ್ ಜೋರಾಗಿದೆ.

ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
Aamir Khan, Arijit Singh
ಮದನ್​ ಕುಮಾರ್​
|

Updated on: Feb 04, 2026 | 9:39 PM

Share

ದೇಶವೇ ಮೆಚ್ಚಿದ ಗಾಯಕ ಅರಿಜಿತ್ ಸಿಂಗ್ (Arijit Singh) ಅವರು ಕೆಲವೇ ದಿನಗಳ ಹಿಂದೆ ನಿವೃತ್ತಿ ಘೋಷಿಸಿದ್ದರು. ಇನ್ಮುಂದೆ ಯಾವುದೇ ಸಿನಿಮಾ ಗೀತೆಗಳನ್ನು ಹಾಡುವುದಿಲ್ಲ ಎಂದು ಅವರು ಹೇಳಿದ್ದರು. ಅವರ ಈ ನಿರ್ಧಾರದಿಂದ ಕೋಟ್ಯಂತರ ಅಭಿಮಾನಿಗಳಿಗೆ ಆಘಾತ ಆಯಿತು. ಅರಿಜಿತ್ ಸಿಂಗ್ ಅವರು ನೂರಾರು ಸೂಪರ್ ಹಿಟ್ ಹಾಡುಗಳಿಗೆ ಧ್ವನಿ ಆಗಿದ್ದಾರೆ. ಆದರೆ ಅವರು ಏಕಾಏಕಿ ನಿವೃತ್ತಿ (Retirement) ತೆಗೆದುಕೊಂಡಿರುವುದು ಎಲ್ಲರಿಗೂ ಬೇಸರ ಮೂಡಿಸಿದೆ. ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ (Aamir Khan) ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.

ಈ ರೀತಿ ಸುದ್ದಿ ಹಬ್ಬಲು ಕಾರಣ ಕೂಡ ಇದೆ. ಆಮಿರ್ ಖಾನ್ ಅವರು ಇತ್ತೀಚೆಗೆ ಅರಿಜಿತ್ ಸಿಂಗ್ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಮುಂಬೈನಿಂದ ಪಶ್ವಿಮ ಬಂಗಾಳಕ್ಕೆ ತೆರಳಿ, ಅಲ್ಲಿರುವ ಅರಿಜಿತ್ ಸಿಂಗ್ ಅವರ ಮನೆಗೆ ಆಮಿರ್ ಖಾನ್ ಭೇಟಿ ನೀಡಿರುವುದು ಅಚ್ಚರಿ ಮೂಡಿಸಿದೆ. ಈ ಸಂದರ್ಭದ ಫೋಟೋ ಮತ್ತು ವಿಡಿಯೋಗಳು ವೈರಲ್ ಆಗಿವೆ.

ಅರಿಜಿತ್ ಸಿಂಗ್ ಅವರಿಗೆ ತುಂಬಾ ಡಿಮ್ಯಾಂಡ್ ಇದೆ. ಸದ್ಯಕ್ಕಂತೂ ಅವರು ತಮ್ಮ ವೃತ್ತಿಜೀವನದ ಉತ್ತುಂಗದಲ್ಲಿ ಇದ್ದಾರೆ. ಇಂಥ ಸಮಯದಲ್ಲಿ ನಿವೃತ್ತಿ ಘೋಷಿಸಿರುವುದು ಚಿತ್ರರಂಗಕ್ಕೆ ಕೂಡ ನಷ್ಟ. ಹಾಗಾಗಿ ಅವರನ್ನು ಮತ್ತೆ ಹಿನ್ನೆಲೆ ಗಾಯನಕ್ಕೆ ಕರೆತರಬೇಕು ಎಂಬುದು ಅನೇಕರ ಬಯಕೆ ಆಗಿದೆ. ಆ ಕಾರಣದಿಂದಲೇ ಆಮಿರ್ ಖಾನ್ ಅವರು ಅರಿಜಿತ್ ಸಿಂಗ್ ನಿವಾಸಕ್ಕೆ ಬಂದಿದ್ದಾರೆ ಎನ್ನಲಾಗಿದೆ.

ಆದರೆ ಈ ಬಗ್ಗೆ ಆಮಿರ್ ಖಾನ್ ಅವರು ಸದ್ಯಕ್ಕೆ ಪ್ರತಿಕ್ರಿಯೆ ನೀಡಿಲ್ಲ. ಯಾವ ಕಾರಣಕ್ಕಾಗಿ ಅವರು ಅರಿಜಿತ್ ಸಿಂಗ್ ನಿವಾಸಕ್ಕೆ ಭೇಟಿ ನೀಡಿದ್ದಾರೆ ಎಂಬುದು ಸದ್ಯಕ್ಕೆ ಗೌಪ್ಯವಾಗಿದೆ. ಶೀಘ್ರದಲ್ಲೇ ಅವರು ಈ ಬಗ್ಗೆ ಸ್ಪಷ್ಟನೆ ನೀಡುವ ಸಾಧ್ಯತೆ ಇದೆ.

ಇದನ್ನೂ ಓದಿ: ನಿವೃತ್ತಿ ಘೋಷಣೆಗೂ ಮೊದಲು ಅರಿಜಿತ್ ಮಾಡಿಕೊಂಡ ಆಸ್ತಿ ಎಷ್ಟು?

‘ಇದನ್ನು ನಿಲ್ಲಿಸುತ್ತಿದ್ದೇನೆ. ನಮಸ್ಕಾರ, ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಕೇಳುಗರಾಗಿ ಇಷ್ಟು ವರ್ಷಗಳ ಕಾಲ ನನಗೆ ಇಷ್ಟೊಂದು ಪ್ರೀತಿ ನೀಡಿದ್ದಕ್ಕಾಗಿ ನಿಮ್ಮೆಲ್ಲರಿಗೂ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಇನ್ನು ಮುಂದೆ ನಾನು ಹಿನ್ನೆಲೆ ಗಾಯಕನಾಗಿ ಯಾವುದೇ ಹೊಸ ಕೆಲಸಗಳನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ಈ ಪ್ರಯಾಣ ಅದ್ಭುತವಾಗಿತ್ತು’ ಎಂದು ಅರಿಜಿತ್ ಸಿಂಗ್ ಅವರು ಪೋಸ್ಟ್ ಮಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ