Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀಲ್​ಚೇರ್​​ನಲ್ಲಿ ಅಪ್ಪ-ಅಮ್ಮನನ್ನು ಕರೆತಂದು ಮತ ಚಲಾಯಿಸಿದ ಅರವಿಂದ್ ಕೇಜ್ರಿವಾಲ್

ವೀಲ್​ಚೇರ್​​ನಲ್ಲಿ ಅಪ್ಪ-ಅಮ್ಮನನ್ನು ಕರೆತಂದು ಮತ ಚಲಾಯಿಸಿದ ಅರವಿಂದ್ ಕೇಜ್ರಿವಾಲ್

ಸುಷ್ಮಾ ಚಕ್ರೆ
|

Updated on: Feb 05, 2025 | 5:26 PM

ದೆಹಲಿ ವಿಧಾನಸಭಾ ಚುನಾವಣೆ ಇಂದು ನಡೆಯುತ್ತಿದೆ. 2013, 2015 ಮತ್ತು 2020ರ ವಿಧಾನಸಭೆ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಆಯ್ಕೆ ಮಾಡಿದ ನವದೆಹಲಿ ಕ್ಷೇತ್ರವು ಈ ಬಾರಿ ತ್ರಿಕೋನ ಸ್ಪರ್ಧೆಗೆ ಸಾಕ್ಷಿಯಾಗಿದೆ. ಅರವಿಂದ್ ಕೇಜ್ರಿವಾಲ್ ಬಿಜೆಪಿಯ ಪರ್ವೇಶ್ ವರ್ಮಾ ಮತ್ತು ಕಾಂಗ್ರೆಸ್‌ನ ಸಂದೀಪ್ ದೀಕ್ಷಿತ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಪುತ್ರರು. ದೆಹಲಿಯ 70 ವಿಧಾನಸಭಾ ಸ್ಥಾನಗಳಿಗೆ ಒಟ್ಟು 699 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ.

ನವದೆಹಲಿ: ದೆಹಲಿಯಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಇಂದು ಮಾಜಿ ಮುಖ್ಯಮಂತ್ರಿ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ನವದೆಹಲಿ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ಕುಟುಂಬದೊಂದಿಗೆ ಆಗಮಿಸಿ ಮತ ಚಲಾಯಿಸಿದರು. ಇದೇ ಕ್ಷೇತ್ರದಲ್ಲಿ ಅವರು ಅಭ್ಯರ್ಥಿಯಾಗಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರು ಲೇಡಿ ಇರ್ವಿನ್ ಸೀನಿಯರ್ ಸೆಕೆಂಡರಿ ಶಾಲೆಯ ಮತಗಟ್ಟೆಗೆ ತಮ್ಮ ಪೋಷಕರು, ಪತ್ನಿ ಮತ್ತು ಮಗನೊಂದಿಗೆ ಆಗಮಿಸಿದರು. ಅವರ ಪೋಷಕರಾದ ಗೋವಿಂದ ರಾಮ್ ಕೇಜ್ರಿವಾಲ್ ಮತ್ತು ಗೀತಾ ದೇವಿ ವೀಲ್‌ಚೇರ್‌ಗಳಲ್ಲಿದ್ದರು. ಅರವಿಂದ್ ಕೇಜ್ರಿವಾಲ್ ತಮ್ಮ ತಾಯಿಯ ವೀಲ್‌ಚೇರ್ ಅನ್ನು ತಳ್ಳಿಕೊಂಡು ಮತಗಟ್ಟೆಗೆ ಬಂದರು.

ದೆಹಲಿಯಲ್ಲಿ 1.5 ಕೋಟಿ ನೋಂದಾಯಿತ ಮತದಾರರಿದ್ದಾರೆ, ಅವರಲ್ಲಿ 83.76 ಲಕ್ಷ ಪುರುಷರು, 72.36 ಲಕ್ಷ ಮಹಿಳೆಯರು ಮತ್ತು 1,267 ತೃತೀಯ ಲಿಂಗಿಗಳು ಸೇರಿದ್ದಾರೆ. 2020ರ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ 62 ಸ್ಥಾನಗಳನ್ನು ಗೆದ್ದರೆ, ಬಿಜೆಪಿ 8 ಸ್ಥಾನಗಳನ್ನು ಗೆದ್ದಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ