ಕಾವಿ ಧರಿಸಿ ರಾಜಕೀಯಕ್ಕೆ ಬಂದರೆ ಅದು ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಥರ ಎಡಬಿಡಂಗಿತನ ಆಗುತ್ತದೆ: ಮುಖ್ಯಮಂತ್ರಿ ಚಂದ್ರು, ಆಪ್ ಮುಖಂಡ

ಅರುಣ್​ ಕುಮಾರ್​ ಬೆಳ್ಳಿ

Updated on: Feb 25, 2023 | 6:03 PM

ಕಾವಿ ಧರಿಸಿ ಬಂದರೆ ಅದು ಸಿದ್ಧಾಂತಗಳಿಗೆ ಧಕ್ಕೆಯನ್ನುಂಟು ಮಾಡುತ್ತದೆ ಎಂದು ಹೇಳಿದ ಅವರು ಕಾವಿತೊಟ್ಟು ರಾಜಕೀಯಕ್ಕೆ ಬಂದಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಎಡಬಿಡಂಗಿ ಅಂತ ಕರೆದರು.

ಗದಗ: ವಿಚಾರವಾದಿ, ಸಿನಿಮಾ ನಟ, ರಂಗಭೂಮಿ ಕಲಾವಿದ ಮತ್ತು ರಾಜಕಾರಣಿಯೂ ಆಗಿರುವ ಮುಖ್ಯಮಂತ್ರಿ ಚಂದ್ರು (Mukhyamantri Chandru) ಅವರು ನೇರ ಮಾತಿಗಾರಿಕೆಗೆ ಖ್ಯಾತಿವಂತರು. ಈಗ ಅವರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷದ (AAP) ಕಾರ್ಯಕರ್ತ. ಗದಗನಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಚಂದ್ರು ಅವರು ಮಠಾಧೀಶರು ರಾಜಕಾರಣದಲ್ಲಿ ಮೂಗು ತೂರಿಸುವುದನ್ನು ತೀವ್ರವಾಗಿ ಖಂಡಿಸಿದರು. ಅವರು ರಾಜಕಾರಣಕ್ಕೆ ಬರುವುದೇ ಅದರೆ, ಮೈಮೇಲಿನ ಕಾವಿಯನ್ನು ತೆಗೆದು ಬರಲಿ, ಕಾವಿ ಧರಿಸಿ ಬಂದರೆ ಅದು ಸಿದ್ಧಾಂತಗಳಿಗೆ ಧಕ್ಕೆಯನ್ನುಂಟು ಮಾಡುತ್ತದೆ ಎಂದು ಹೇಳಿದ ಅವರು ಕಾವಿತೊಟ್ಟು ರಾಜಕೀಯಕ್ಕೆ ಬಂದಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರನ್ನು ಎಡಬಿಡಂಗಿ ಅಂತ ಕರೆದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.