ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್: ಎಲ್ಲೆಲ್ಲೂ ಖಾಕಿ ಪಡೆ ನಿಯೋಜನೆ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕೋಳತ್ತಮಜಲಿನಲ್ಲಿ ಮಂಗಳವಾರ ರಾತ್ರಿ ಅಬ್ದುಲ್ ರಹಿಮಾನ್ ಎಂಬಾತನ ಕೊಲೆ ಮಾಡಲಾಗಿದ್ದು, ಇದರ ಬೆನ್ನಲ್ಲೇ ಮಂಗಳೂರು ಮತ್ತೆ ಉದ್ವಿಗ್ನವಾಗಿದೆ. ಸದ್ಯ ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕಿನಲ್ಲಿ ಬಿಎನ್ಎಸ್ 163ರ ಅಡಿ ಮೇ 30ರ ಸಂಜೆ 6 ಗಂಟೆಯವೆಗೆ ನಿಷೇಧಾಜ್ಞೆ ಹೇರಲಾಗಿದ್ದು, ಎಲ್ಲೆಡೆ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಮಂಗಳೂರು, ಮೇ 28: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಂಟ್ವಾಳ ತಾಲೂಕಿನಲ್ಲಿ ಮಂಗಳವಾರ ರಾತ್ರಿ ಅಬ್ದುಲ್ ರಹಿಮಾನ್ ಎಂಬಾತನ ಕೊಲೆಯಾಗಿದ್ದು, ಇದರ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ಸೃಷ್ಟಿಯಾಗಿದೆ. ಹೀಗಾಗಿ ಜಿಲ್ಲೆಯ ಪ್ರಮುಖ ಪ್ರದೇಶಗಳಲ್ಲಿ ಮೇ 30ರ ಸಂಜೆ 6 ಗಂಟೆಯವೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಂಗಳೂರು ನಗರ, ಬಂಟ್ವಾಳ ಸೇರಿದಂತೆ ಜಿಲ್ಲೆಯಾದ್ಯಂತ ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
Loading...
Unable to load recommendations.
Follow Us