AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Abhi Aviva Beegara Oota: ಮಂಡ್ಯದಿಂದ ಅಭಿಷೇಕ್-ಅವಿವಾ ಬೀಗರ ಔತಣಕೂಟದ ನೇರ ಪ್ರಸಾರ

Abhi Aviva Beegara Oota: ಮಂಡ್ಯದಿಂದ ಅಭಿಷೇಕ್-ಅವಿವಾ ಬೀಗರ ಔತಣಕೂಟದ ನೇರ ಪ್ರಸಾರ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Jun 16, 2023 | 5:51 PM

Share

ಸುಮಾರು 15 ಎಕರೆ ಪ್ರದೇಶದಲ್ಲಿ ವ್ಯವಸ್ಥೆ ಮಾಡಲಾಗಿರುವ ಬೀಗರ ಊಟಕ್ಕೆ ಸುಮಾರು 50,000 ಜನ ಆಗಮಿಸಲಿದ್ದು ವಿವಿಧ ಮಾಂಸಾಹಾರಿ ಭಕ್ಷ್ಯಗಳು ಅವರಿಗಾಗಿ ಕಾಯುತ್ತಿವೆ.

ಮಂಡ್ಯ: ಅಭಿಷೇಕ್ ಮತ್ತು ಅವಿವಾ (Abhishek-Aviva) ಮೊನ್ನೆ ವಿವಾಹ ಬಂಧನದಲ್ಲಿ ಬೆಸೆದ ಪ್ರಯಕ್ತ ಸಂಸದೆ ಸುಮಲತಾ ಅಂಬರೀಷ್ (Sumalatha Ambareesh) ಅವರು ಇಂದು ನಗರದ ಹೊರವಲಯದಲ್ಲಿರುವ ಗೆಜ್ಜಲೆಗೆರೆಯಲ್ಲಿ ಭಾರೀ ಪ್ರಮಾಣದ ಬೀಗರ ಔತಣವನ್ನು (feast) ಏರ್ಪಡಿಸಿದ್ದಾರೆ. ಸುಮಾರು 15 ಎಕರೆ ಪ್ರದೇಶದಲ್ಲಿ ವ್ಯವಸ್ಥೆ ಮಾಡಲಾಗಿರುವ ಬೀಗರ ಊಟಕ್ಕೆ ಸುಮಾರು 50,000 ಜನ ಆಗಮಿಸಲಿದ್ದು ವಿವಿಧ ಮಾಂಸಾಹಾರಿ ಭಕ್ಷ್ಯಗಳು ಅವರಿಗಾಗಿ ಕಾಯುತ್ತಿವೆ. ನಮಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ರೆಬೆಲ್ ಸ್ಟಾರ್ ಅಂಬರೀಷ್ ಅವರ ಇಷ್ಟದ ಮಾಂಸಾಹಾರಿ ಖಾದ್ಯಗಳನ್ನು ಔತಣಕ್ಕೆ ಸಿದ್ಧಪಡಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jun 16, 2023 11:40 AM
Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.