AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನಾಗಿದ್ದರೆ ಸಿದ್ದರಾಮಯ್ಯ ಕಪಾಳಕ್ಕೆ ಹೊಡೆಯುತ್ತಿದ್ದೆ: ಅಭಿನವ ಸಂಗನಬಸವ ಸ್ವಾಮೀಜಿ

“ನಾನಾಗಿದ್ದರೆ ಸಿದ್ದರಾಮಯ್ಯ ಕಪಾಳಕ್ಕೆ ಹೊಡೆಯುತ್ತಿದ್ದೆ”: ಅಭಿನವ ಸಂಗನಬಸವ ಸ್ವಾಮೀಜಿ

ಅಶೋಕ ಯಡಳ್ಳಿ, ವಿಜಯಪುರ
| Updated By: ವಿವೇಕ ಬಿರಾದಾರ

Updated on:Nov 14, 2024 | 12:15 PM

ವಿಜಯಪುರದಲ್ಲಿ ನಡೆದ ಕಿತ್ತೂರ ರಾಣಿ ಚನ್ನಮ್ಮನ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಮನಗೂಳಿಯ ಹಿರೇಮಠದ ಅಭಿನವ ಸಂಗನಬಸವ ಸ್ವಾಮೀಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವಾಚ್ಯ ಶಬ್ದದಿಂದ ನಿಂದಿಸಿದ್ದಾರೆ.

ವಿಜಯಪುರ, ನವೆಂಬರ್​ 14: ಬಸವನಬಾಗೇವಾಡಿ (Basavan Bagewadi) ತಾಲೂಕಿನ ಮನಗೂಳಿಯ ಹಿರೇಮಠದ ಅಭಿನವ ಸಂಗನಬಸವ ಸ್ವಾಮೀಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವಾಚ್ಯ ಶಬ್ದದಿಂದ ನಿಂದಿಸಿದ್ದಾರೆ. ಕೊಲ್ಹಾರ (Kolar) ತಾಲೂಕಿನ ರೋಣಿಹಾಳ ಗ್ರಾಮದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಯುವಕ ಸಂಘ ಹಾಗೂ ಕೊಲ್ಹಾರ ತಾಲೂಕು ಪಂಚಮಸಾಲಿ ಸಮಾಜವತಿಯಿಂದ ನಡೆದ ಕಿತ್ತೂರ ರಾಣಿ ಚನ್ನಮ್ಮನ 246ನೇ ಜಯಂತ್ಯೋತ್ಸವ ಹಾಗೂ 200ನೇ ವಿಜಯೋತ್ಸವ ಸಮಾರಂಭ ನಡೆಯಿತು.

ಸಮಾರಂಭದಲ್ಲಿ ಅಭಿನವ ಸಂಗನಬಸವ ಸ್ವಾಮೀಜಿ “ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರವಾಗಿ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಬಸವ ಜಯಮೃತ್ಯುಂಜಯ ಶ್ರೀಗಳ ಹೆಗಲ ಮೇಲೆ ಸಿದ್ದರಾಮಯ್ಯ ಹಾಕಿದ್ದರು. ನಾನಾಗಿದ್ದರೆ ಸಿಎಂ ಸಿದ್ದರಾಮಯ್ಯ ಕಪಾಳಕ್ಕೆ ಹೊಡೆಯುತ್ತಿದ್ದೆ. ಆದರೆ, ಬಸವ ಜಯಮೃತ್ಯುಂಜಯ ಶ್ರೀಗಳು ಸುಮ್ಮನೆ ಇದ್ದರು” ಎಂದು ಸಿಎಂ ಅವರನ್ನು ಅಭಿನವ ಸಂಗನಬಸವಶ್ರೀಗಳು ಏಕವಚನದಲ್ಲಿ ನಿಂದಿಸಿದ್ದಾರೆ.

ಸ್ವಾಮೀಜಿ‌‌ ಅವರ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಸಾಮಾಜಿಕ‌ ಜಾಲತಾಣಗಳಲ್ಲಿ ಸ್ವಾಮೀಜಿ ಅವರಿಗೆ ಜನರು ತರಾಟೆಗೆ ತೆಗೆದುಕೊಂಡಿದ್ದಾರೆ. ಜನರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದ್ದಾರೆ. “ಮಾತಿನ‌ ಭರದದಲ್ಲಿ‌ ಸಿಎಂ ವಿರುದ್ಧ ಮಾತನಾಡಿದೆ. ಅವರ ಸ್ಥಾನಮಾನಕ್ಕೆ ಅವಮಾನ ಮಾಡಿದೆ. ಅದಕ್ಕೆ ವಿಷಾದ ವ್ಯಕ್ತಪಡಿಸುತ್ತಿದ್ದೇನೆಂದು” ಎಂದು ಹೇಳಿದರು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published on: Nov 14, 2024 11:39 AM