ತಲಕಾವೇರಿಯಲ್ಲಿ ಅಭಿಷೇಕ್ ಅಂಬರೀಷ್​-ಅವಿವಾ ದಂಪತಿಯಿಂದ ವಿಶೇಷ ಪೂಜೆ

Updated on: Sep 30, 2023 | 12:02 PM

ನಟ ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ದಂಪತಿ ಮಳೆಗಾಗಿ ಪ್ರಾರ್ಥಿಸಿ ವಿಶೇಷ ಪೂಜೆ ಮಾಡಿದ್ದಾರೆ. ಕೊಡಗು ಜಿಲ್ಲೆಯ ತಲಕಾವೇರಿಗೆ ಈ ದಂಪತಿ ಭೇಟಿ ನೀಡಿದ್ದಾರೆ. ಮಳೆ ಬರಲಿ ಎಂದು ಪ್ರಾರ್ಥಿಸುವುದರ ಜೊತೆಗೆ ಕಾವೇರಿ ವಿವಾದ ಬಗೆಹರಿಯಲೆಂದು ಪ್ರಾರ್ಥನೆ ಸಲ್ಲಿಸಿದ್ದಾರೆ. ರೈತರಿಗೆ ಬೆಂಬಲ ಸೂಚಿಸುವ ನಿಟ್ಟಿನಲ್ಲಿ ಅಂಬರೀಷ್ ಅವರು ಹೆಗಲಮೇಲೆ ಹಸಿರು ಟವೆಲ್ ಹಾಕಿದ್ದರು.

ಈ ವರ್ಷ ರಾಜ್ಯದಲ್ಲಿ ಮಳೆಯ ಅಭಾವ ಕಾಡಿದೆ. ಸರಿಯಾದ ಪ್ರಮಾಣದಲ್ಲಿ ಮಳೆ ಬೀಳುತ್ತಿಲ್ಲ. ಇದು ರಾಜ್ಯದ ಜನರ ಚಿಂತೆಗೆ ಕಾರಣ ಆಗಿದೆ. ಬೆಳೆ ಬೆಳೆಯಲು ಸರಿಯಾದ ನೀರು ಇಲ್ಲದೆ ರೈತರು ಕಂಗಾಲಾಗಿದ್ದಾರೆ. ಮಳೆ ಆಗದೇ ಇದ್ದಾಗ ಕೆಲವರು ವಿಶೇಷ ಪೂಜೆ ಮಾಡಿಸುತ್ತಾರೆ. ನಟ ಅಭಿಷೇಕ್ ಅಂಬರೀಷ್ (Abhishek Ambareesh) ಹಾಗೂ ಅವಿವಾ ದಂಪತಿ ಮಳೆಗಾಗಿ ಪ್ರಾರ್ಥಿಸಿ ವಿಶೇಷ ಪೂಜೆ ಮಾಡಿದ್ದಾರೆ. ಕೊಡಗು ಜಿಲ್ಲೆಯ ತಲಕಾವೇರಿಗೆ ಈ ದಂಪತಿ ಭೇಟಿ ನೀಡಿದ್ದಾರೆ. ಮಳೆ ಬರಲಿ ಎಂದು ಪ್ರಾರ್ಥಿಸುವುದರ ಜೊತೆಗೆ ಕಾವೇರಿ ವಿವಾದ (Cauvery Dispute) ಬಗೆಹರಿಯಲೆಂದು ಪ್ರಾರ್ಥನೆ ಸಲ್ಲಿಸಿದ್ದಾರೆ. ರೈತರಿಗೆ ಬೆಂಬಲ ಸೂಚಿಸುವ ನಿಟ್ಟಿನಲ್ಲಿ ಅಂಬರೀಷ್ ಅವರು ಹೆಗಲಮೇಲೆ ಹಸಿರು ಟವೆಲ್ ಹಾಕಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Sep 30, 2023 11:32 AM
Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More