Abhishek Ambareesh: ‘ತುಂಬಾ ಊಟ ವೇಸ್ಟ್​ ಆಗಿದ್ದು ಬೇಜಾರಾಯ್ತು’; ಅಭಿಷೇಕ್ ಅಂಬರೀಷ್

Updated on: Jun 17, 2023 | 8:45 AM

ಕೆಲವರು ಅಡುಗೆ ಮಾಡುತ್ತಿದ್ದ ಜಾಗಕ್ಕೆ ಬಂದು ದಾಂಧಲೆ ನಡೆಸಿದ್ದಾರೆ. ಇದರಿಂದ ಸಾಕಷ್ಟು ಆಹಾರ ಹಾಳಾಗಿದೆ. ಈ ಬಗ್ಗೆ ಅಭಿಷೇಕ್ ಅಂಬರೀಷ್ ಅವರು ಬೇಸರ ಹೊರಹಾಕಿದ್ದಾರೆ.

ಅಭಿಷೇಕ್ ಅಂಬರೀಷ್ (Abhishek Ambareesh) ಹಾಗೂ ಅವಿವಾ ಬಿಡಪ ಅವರ ಬೀಗರೂಟ ಕಾರ್ಯಕ್ರಮ ಜೂನ್ 16ರಂದು ಮಂಡ್ಯದಲ್ಲಿ ಅದ್ದೂರಿಯಾಗಿ ನಡೆಯಿತು. ಸಾವಿರಾರು ಮಂದಿ ಬಂದು ಊಟ ಮಾಡಿ ತೆರಳಿದ್ದಾರೆ. ಆದರೆ, ಕೆಲವರು ಅಡುಗೆ ಮಾಡುತ್ತಿದ್ದ ಜಾಗಕ್ಕೆ ಬಂದು ದಾಂಧಲೆ ನಡೆಸಿದ್ದಾರೆ. ಇದರಿಂದ ಸಾಕಷ್ಟು ಆಹಾರ ಹಾಳಾಗಿದೆ. ಈ ಬಗ್ಗೆ ಅಭಿಷೇಕ್ ಅಂಬರೀಷ್ ಅವರು ಬೇಸರ ಹೊರಹಾಕಿದ್ದಾರೆ. ‘ಬಂದಷ್ಟೂ ಜನರಿಗೆ ಊಟ ಬಡಿಸಿ ಎಂದು ನಾವು ಹೇಳಿದ್ದೆವು. ಆದರೆ, ಕೆಲವರು ಬಂದು ತೊಂದರೆ ಮಾಡಿದರು. ಇದರಿಂದ ಸಾಕಷ್ಟು ಊಟ ವೇಸ್ಟ್​ ಆಯಿತು. ಆ ಬಗ್ಗೆ ಬೇಸರ ಇದೆ’ ಎಂದಿದ್ದಾರೆ ಅಭಿಷೇಕ್.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Jun 17, 2023 08:37 AM
Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More