ಅಭಿಷೇಕ್ ಅಂಬರೀಷ್ (Abhishek Ambareesh) ಹಾಗೂ ಅವಿವಾ ಬಿಡಪ ಅವರ ಬೀಗರೂಟ ಕಾರ್ಯಕ್ರಮ ಜೂನ್ 16ರಂದು ಮಂಡ್ಯದಲ್ಲಿ ಅದ್ದೂರಿಯಾಗಿ ನಡೆಯಿತು. ಸಾವಿರಾರು ಮಂದಿ ಬಂದು ಊಟ ಮಾಡಿ ತೆರಳಿದ್ದಾರೆ. ಆದರೆ, ಕೆಲವರು ಅಡುಗೆ ಮಾಡುತ್ತಿದ್ದ ಜಾಗಕ್ಕೆ ಬಂದು ದಾಂಧಲೆ ನಡೆಸಿದ್ದಾರೆ. ಇದರಿಂದ ಸಾಕಷ್ಟು ಆಹಾರ ಹಾಳಾಗಿದೆ. ಈ ಬಗ್ಗೆ ಅಭಿಷೇಕ್ ಅಂಬರೀಷ್ ಅವರು ಬೇಸರ ಹೊರಹಾಕಿದ್ದಾರೆ. ‘ಬಂದಷ್ಟೂ ಜನರಿಗೆ ಊಟ ಬಡಿಸಿ ಎಂದು ನಾವು ಹೇಳಿದ್ದೆವು. ಆದರೆ, ಕೆಲವರು ಬಂದು ತೊಂದರೆ ಮಾಡಿದರು. ಇದರಿಂದ ಸಾಕಷ್ಟು ಊಟ ವೇಸ್ಟ್ ಆಯಿತು. ಆ ಬಗ್ಗೆ ಬೇಸರ ಇದೆ’ ಎಂದಿದ್ದಾರೆ ಅಭಿಷೇಕ್.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:37 am, Sat, 17 June 23