ಅಂಬರೀಷ್ ಪುಣ್ಯಸ್ಮರಣೆ: ಸಮಾಧಿ ಎದುರು ಅಮ್ಮನ ತಬ್ಬಿದ ಅಭಿಷೇಕ್

Updated on: Nov 24, 2023 | 12:57 PM

ಕಂಠೀರವ ಸ್ಟುಡಿಯೋದಲ್ಲಿ ಅಂಬರೀಷ್ ಸಮಾಧಿಗೆ ಸುಮಲತಾ, ಅಭಿಷೇಕ್ ಅಂಬರೀಷ್, ರಾಕ್​ಲೈನ್ ವೆಂಕಟೇಶ್ ಪೂಜೆ ಸಲ್ಲಿಕೆ ಮಾಡಿದ್ದಾರೆ. ತಂದೆಯನ್ನು ನೆನದು ಅಮ್ಮನ ತಬ್ಬಿದ್ದಾರೆ ಅಭಿಷೇಕ್.

ಇಂದು (ನವೆಂಬರ್ 24) ಅಂಬರೀಷ್ (Ambareesh) ಅವರ ಐದನೇ ವರ್ಷ ಪುಣ್ಯಸ್ಮರಣೆ. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಅಂಬರೀಷ್ ಸಮಾಧಿಗೆ ಸುಮಲತಾ, ಅಭಿಷೇಕ್ ಅಂಬರೀಷ್, ರಾಕ್​ಲೈನ್ ವೆಂಕಟೇಶ್ ಪೂಜೆ ಸಲ್ಲಿಕೆ ಮಾಡಿದ್ದಾರೆ. ತಂದೆಯನ್ನು ನೆನದು ಅಮ್ಮನ ತಬ್ಬಿದ್ದಾರೆ ಅಭಿಷೇಕ್. ಈ ಸಂದರ್ಭದ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ‘ಅಂಬಿ ನಮ್ಮ ಜೊತೆ ಇರಬೇಕಿತ್ತು’ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಅಂಬರೀಷ್ ಪುಣ್ಯಸ್ಮರಣೆಯ ದಿನದಂದೇ ಅಭಿಷೇಕ್ ಅವರ ಹೊಸ ಸಿನಿಮಾ ‘ಬ್ಯಾಡ್ ಮ್ಯಾನರ್ಸ್​’ ರಿಲೀಸ್ ಆಗಿದೆ ಅನ್ನೋದು ವಿಶೇಷ. ‘ದುನಿಯಾ’ ಸೂರಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ
ಇದನ್ನೂ ಓದಿ:

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More