ದಕ್ಷಿಣ ಕನ್ನಡದಲ್ಲಿ ನೆರವೇರಿದ ಮಂತ್ರದೇವತೆಯ ಕಾರಣಿಕ, 36 ವರ್ಷಗಳ ನಂತರ ಊರು ಸೇರಿದ ವ್ಯಕ್ತಿ!

Updated on: Jun 26, 2025 | 11:41 AM

ಚಂದ್ರಶೇಖರ್ 36 ವರ್ಷಗಳ ಹಿಂದೆ ಮನೆಬಿಟ್ಟು ಮುಂಬೈಗೆ ಹೋಗಿ ಅಲ್ಲೊಂದು ಹೋಟೆಲ್ ನಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ಮೊದಲ 6 ತಿಂಗಳು ಕಾಲ ಮನೆಗೆ ಪತ್ರ ಬರೆಯುತ್ತಿದ್ದ ಅವರು ಇದ್ದಕ್ಕಿದಂತೆ ನಿಲ್ಲಿಸಿಬಿಟ್ಟಿದ್ದಾರೆ. ಮೊಬೈಲ್ ಇಲ್ಲದ ಜಮಾನಾದಲ್ಲಿ ಹುಡುಕುವ ಪ್ರಯತ್ನ ಕುಟುಂಬಸ್ಥರು ಮಾಡಿದ್ದಾರೆ, ಅದರೆ ಎಲ್ಲ ನಿಷ್ಫಲವಾಗಿದೆ. ಮುಂಬೈನಲ್ಲ್ಲಿ ಹೋಟೆಲ್​ನವರು ಚಂದ್ರಶೇಖರ್​ರನ್ನು ಮಗನಂತೆ ನೋಡಿಕೊಂಡಿದ್ದಾರೆ ಮತ್ತು ಅವರ ಮಾನಸಿಕ ಸ್ವಾಸ್ಥ್ಯ ಕೆಟ್ಟಾಗ ಚಿಕಿತ್ಸೆ ಕೊಡಿಸಿದ್ದಾರೆ.

ದಕ್ಷಿಣ ಕನ್ನಡ, ಜೂನ್ 26: ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಇರುವೈಲು ಗ್ರಾಮದಲ್ಲಿ ಪವಾಡವೊಂದು ನಡೆದಿದ್ದು ತುಳುನಾಡಿನ ಕಾರಣಿಕ ಮಂತ್ರದೇವತೆ ನೀಡಿದ ಕಾರಣಿಕತೆ ನಿಜವಾಗಿದೆ. ವಿಡಿಯೋದಲ್ಲಿ ವೃದ್ಧೆ ಮತ್ತು ಒಬ್ಬ ಹಿರಿಯ ವ್ಯಕ್ತಿಯನ್ನು ನೋಡಬಹುದು. ವ್ಯಕ್ತಿಯ ಹೆಸರು ಚಂದ್ರಶೇಖರ್ ಮತ್ತು 36 ವರ್ಷಗಳ ಹಿಂದೆ ಊರಿಂದ ಕಾಣೆಯಾಗಿದ್ದರು. ಮಗ ಒಂದಿಲ್ಲೊಂದು ವಾಪಸ್ಸು ಬರುತ್ತಾನೆ ಅಂತ ತಾಯಿ ರಾಮನಿಗಾಗಿ ಶಬರಿ ಕಾದಂತೆ ಕಾಯುತ್ತಿದ್ದರೆ ಚಂದ್ರಶೇಖರ್ ಸಹೋದರರು ದೈವದ ಮೊರೆ ಹೊಕ್ಕಿದ್ದರು. ಮೇ 29ರಂದು ನಡೆದ ದೈವ ದರ್ಶನ ಕಾರ್ಯಕ್ರಮಕ್ಕೆ ಚಂದ್ರಶೇಖರ್ ಬಂದೇ ಬರುತ್ತಾರೆ ಮತ್ತು ಹಿರಿಮಗನಿಂದಲೇ ಸೇವೆ ನಡೆಯುತ್ತದೆ ಎಂದು ದೇವ ಹೇಳಿತ್ತಂತೆ. ದೈವದರ್ಶನಕ್ಕೆ ಮೂರು ದಿನ ಮೊದಲು ಚಂದ್ರಶೇಖರ್ ಮನೆಗೆ ಬಂದರು ಎಂದು ಕುಟುಂಬಸ್ಥರು ಹೇಳುತ್ತಾರೆ.

ಇದನ್ನೂ ಓದಿ: ಸಮುದ್ಧ ದಿನಗಳು ಬರುತ್ತವೆ- ಸಾವಿರಾರು ಭಕ್ತ ಸಾಗರದ ನಡುವೆ ಶುಭ ಸಂದೇಶ ನುಡಿದ ಕಾರಣಿಕ ಪೂಜಾರಿ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Published on: Jun 26, 2025 11:40 AM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More