ಬಿಎಸ್​ವೈ ಇಲ್ಲದಿರುವುದು ಬಿಜೆಪಿಗೆ ಶಾಪ; ಎಂಪಿ ರೇಣುಕಾಚಾರ್ಯ, ವಿಡಿಯೋ ಇಲ್ಲಿದೆ

Edited By: ಕಿರಣ್ ಹನುಮಂತ್​ ಮಾದಾರ್

Updated on: Aug 31, 2023 | 10:34 PM

ಪ್ರತಿಯೊಬ್ಬ ಪಕ್ಷದ ಸಾಮಾನ್ಯ ಕಾರ್ಯಕರ್ತನ ಅಪೇಕ್ಷೆಯನ್ನು ನಾನು ನೇರವಾಗಿ ಹೇಳಿದ್ದೇನೆ. ಕೆಲ ವ್ಯಕ್ತಿಗಳ ದೌರ್ಬಲ್ಯವನ್ನು ನಾನು ನೇರವಾಗಿ ಖಂಡಿಸಿದ್ದೇನೆ. ನಾನು ಬಿಜೆಪಿ ಬಿಡೋದಿಲ್ಲ, ಪಕ್ಷದಲ್ಲೇ ಇದ್ದೇನೆ. ನಾನು ಯಾವುದನ್ನು ಮುಚ್ಚುಮರೆ ಇಲ್ಲದೆ ಹೇಳಿದ್ದೇನೆ. ಪಕ್ಷದಲ್ಲಿ ಸಂಘಟನೆ ಕೊರತೆ ಇದೆ, ಇದು ಸರಿಯಾಗಬೇಕು ಎಂದು ಬಿಜೆಪಿ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಹೇಳಿದರು.

ಬೆಂಗಳೂರು, ಆ.31: ಬಿಎಸ್​ ಯಡಿಯೂರಪ್ಪ (BS Yediyurappa) ಅಂತಹ ಮಹಾನ್​ ನಾಯಕರನ್ನು ಕಡೆಗಣಿಸಿ ಬಿಜೆಪಿಗೆ ಶಾಪ ಆಗಿದೆ ಎಂದು ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ(MP Renuakacharya) ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ಇವತ್ತು ಪಕ್ಷದಲ್ಲಿ ವರ್ಚಸ್ಸು ಇರುವವರಿಗೆ ಬೆಳೆಯಲು ಬಿಡುತ್ತಿಲ್ಲ. ಇದರಿಂದ ನನಗೆ ವೈಯಕ್ತಿಕವಾಗಿ ಯಾವ ಲಾಭ ಇಲ್ಲ, ನಷ್ಟವೂ ಇಲ್ಲ. ಪ್ರತಿಯೊಬ್ಬ ಪಕ್ಷದ ಸಾಮಾನ್ಯ ಕಾರ್ಯಕರ್ತನ ಅಪೇಕ್ಷೆಯನ್ನು ನಾನು ನೇರವಾಗಿ ಹೇಳಿದ್ದೇನೆ ಎಂದರು. ನಾನು ಪಕ್ಷ, ಮೋದಿ, ನಡ್ಡಾ, ಅಮಿತ್ ಶಾ ವಿರುದ್ಧ ಮಾತಾಡಿಲ್ಲ. ಕೆಲ ವ್ಯಕ್ತಿಗಳ ದೌರ್ಬಲ್ಯವನ್ನು ನಾನು ನೇರವಾಗಿ ಖಂಡಿಸಿದ್ದೇನೆ. ನಾನು ಬಿಜೆಪಿ ಬಿಡೋದಿಲ್ಲ, ಪಕ್ಷದಲ್ಲೇ ಇದ್ದೇನೆ. ನಾನು ಯಾವುದನ್ನು ಮುಚ್ಚುಮರೆ ಇಲ್ಲದೆ ಹೇಳಿದ್ದೇನೆ. ಪಕ್ಷದಲ್ಲಿ ಸಂಘಟನೆ ಕೊರತೆ ಇದೆ, ಇದು ಸರಿಯಾಗಬೇಕು ಎಂದಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Follow Us
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More