Anna Bhagya Scheme; ಬ್ಯಾಂಕಲ್ಲಿ ಖಾತೆ ಹೊಂದಿರದವರು ಬೇಗ ಓಪನ್ ಮಾಡಿಸಿಕೊಳ್ಳಬೇಕು: ಕೆಹೆಚ್ ಮುನಿಯಪ್ಪ

ಅರುಣ್​ ಕುಮಾರ್​ ಬೆಳ್ಳಿ

Updated on: Jun 30, 2023 | 2:21 PM

ಹಣದ ಬದಲು ಜನ ರಾಗಿ ಅಥವಾ ಜೋಳ ಕೇಳಿದರೆ, ಅವುಗಳನ್ನು ಎರಡೆರಡು ಕೆಜಿಯಂತೆ ಒದಗಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಸಚಿವರು ಹೇಳಿದರು.

ಬೆಂಗಳೂರು: ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ ಹೆಚ್ ಮುನಿಯಪ್ಪ (KH Muniyappa) ಇಂದು ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಟಿಯೊಂದನ್ನು ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಭರವಸೆ ನೀಡುರುವ ಹಾಗೆ ನಾಳೆಯಿಂದ ಅನ್ನಭಾಗ್ಯ ಯೋಜನೆ (Anna Bhagya scheme) ಜಾರಿಗೊಳ್ಳಲಿದೆ ಎಂದು ಹೇಳಿದರು. ಅಕ್ಕಿ ಬದಲು ಬಿಪಿಎಲ್ ಕಾರ್ಡುದಾರರಿಗೆ ಹಣ ನೀಡುವ ವಿಚಾರ ಮಾತಾಡಿದ ಸಚಿವರು, ಬ್ಯಾಂಕ್ ಖಾತೆ ಹೊಂದಿರುವವರಿಗೆಲ್ಲ ಹಣ ವರ್ಗಾಯಿಸಲಾಗುವುದು ಎಂದರು. ಕುಟುಂಬವೊಂದರಲ್ಲಿ 5 ಜನ ಇದ್ದರೆ ಅವರಿಗೆ ವಿತರಿಸಬೇಕಿದ್ದ 25 ಕೆಜಿ ಅಕ್ಕಿ ಬದಲು ಕೆಜಿಗೆ ರೂ. 34 ರಂತೆ ರೂ. 850 ಅನ್ನು ವರ್ಗಾಯಿಸಲಾಗಗುವುದು ಎಂದು ಸಚಿವರು ಹೇಳಿದರು. ಬ್ಯಾಂಕ್ ನಲ್ಲಿ ಖಾತೆ ಹೊಂದಿರದವರು ಆದಷ್ಟು ಬೇಗ ಖಾತೆ ಮಾಡಿಸಿಕೊಳ್ಳಬೇಕು ಎಂದು ಹೇಳಿದ ಅವರು, ಹಣದ ಬದಲು ಜನ ರಾಗಿ ಅಥವಾ ಜೋಳ ಕೇಳಿದರೆ, ಅವುಗಳನ್ನು ಎರಡೆರಡು ಕೆಜಿಯಂತೆ ಒದಗಿಸುವ ವ್ಯವಸ್ಥೆ ಮಾಡಲಾಗುವುದು ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.