AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಪ್ ಬೇಕಿದ್ರೆ, ಸೂರ್ಯಕುಮಾರೇ ಬರಲಿ: ಮೊಹ್ಸಿನ್ ನಖ್ವಿ ಮತ್ತೆ ಕಿರಿಕ್

ಕಪ್ ಬೇಕಿದ್ರೆ, ಸೂರ್ಯಕುಮಾರೇ ಬರಲಿ: ಮೊಹ್ಸಿನ್ ನಖ್ವಿ ಮತ್ತೆ ಕಿರಿಕ್

ಝಾಹಿರ್ ಯೂಸುಫ್
|

Updated on: Oct 01, 2025 | 10:24 AM

Share

Asia Cup 2025 Final India vs Pakistan: ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 19.1 ಓವರ್​ಗಳಲ್ಲಿ 146 ರನ್​ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು ಟೀಮ್ ಇಂಡಿಯಾ 19.4 ಓವರ್​ಗಳಲ್ಲಿ ಚೇಸ್ ಮಾಡಿ 5 ವಿಕೆಟ್​ಗಳ ಜಯ ಸಾಧಿಸಿದೆ.

ಮಳೆ ನಿಂತರೂ, ಮಳೆ ಹನಿ ನಿಂತಿಲ್ಲ ಎಂಬಂತೆ ಏಷ್ಯಾಕಪ್ ಮುಗಿದರೂ ವಿವಾದ ಇನ್ನೂ ಕೂಡ ಕೊನೆಗೊಂಡಿಲ್ಲ. ಹ್ಯಾಂಡ್​ಶೇಕ್​ನಿಂದ ಶುರುವಾದ ಈ ವಿವಾದ ಇದೀಗ ಏಷ್ಯಾಕಪ್ ಟ್ರೋಫಿ ಹಸ್ತಾಂತರದ ವಿಷಯಕ್ಕೆ ಬಂದು ನಿಂತಿದೆ. ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

ಈ ಚಾಂಪಿಯನ್ ಪಟ್ಟದ ಬೆನ್ನಲ್ಲೇ ಭಾರತೀಯ ಆಟಗಾರರು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥ/ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿಯಿಂದ ಟ್ರೋಫಿ ಸ್ವೀಕರಿಸಲ್ಲ ಎಂದು ಪಟ್ಟು ಹಿಡಿದಿದ್ದರು. ಟೀಮ್ ಇಂಡಿಯಾ ಆಟಗಾರರ ಈ ನಿರ್ಧಾರದಿಂದ ಮುಖಭಂಗಕ್ಕೆ ಒಳಗಾದ ನಖ್ವಿ, ಏಷ್ಯಾಕಪ್ ಟ್ರೋಫಿ ಹಾಗೂ ವಿನ್ನರ್ ತಂಡ ಮೆಡಲ್​ಗಳನ್ನು ಹೊಟೇಲ್ ರೂಮ್​ಗೆ ಕೊಂಡೊಯ್ಯುವಂತೆ ಸೂಚಿಸಿದ್ದರು. ಹೀಗಾಗಿ ಭಾರತೀಯ ಆಟಗಾರರು ಟ್ರೋಫಿ ಇಲ್ಲದೆ ಏಷ್ಯಾಕಪ್ ಅನ್ನು ಸಂಭ್ರಮಿಸಿದ್ದರು.

ಇದೀಗ ಟೀಮ್ ಇಂಡಿಯಾಗೆ ಟ್ರೋಫಿ ಹಿಂತಿರುಗಿಸುವಂತೆ ಬಿಸಿಸಿಐ ಕಾರ್ಯದರ್ಶಿ ರಾಜೀವ್ ಶುಕ್ಲಾ ಆಗ್ರಹಿಸಿದ್ದಾರೆ. ಎಸಿಸಿ ಸಭೆಯಲ್ಲಿ ಈ ಬಗ್ಗೆ ವಾದಗಳು ನಡೆದಿದ್ದು, ನಖ್ವಿ ಅವರ ನಡೆಗೆ ಬಿಸಿಸಿಐ ಆಕ್ರೋಶವನ್ನು ಹೊರಹಾಕಿದ್ದಾರೆ. ಈ ಆಕ್ರೋಶದ ಬೆನ್ನಲ್ಲೇ ಟ್ರೋಫಿ ಹಸ್ತಾಂತರಿಸಲು ನಖ್ವಿ ಒಪ್ಪಿಕೊಂಡಿದ್ದಾರೆ. ಆದರೆ ಇದಕ್ಕೂ ಒಂದು ಷರತ್ತು ವಿಧಿಸಿ ಉದ್ಧಟತನ ಮೆರೆದಿದ್ದಾರೆ.

ಹೌದು, ಟೀಮ್ ಇಂಡಿಯಾಗೆ ಟ್ರೋಫಿ ಬೇಕಿದ್ದರೆ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಬಂದು ನನ್ನ ಕೈಯಿಂದ ಸ್ವೀಕರಿಸಲು ಎಂದಿದ್ದಾರೆ. ನಖ್ವಿ ಅವರ ಈ ಬೇಡಿಕೆಗೂ ಬಿಸಿಸಿಐ ಆಕ್ರೋಶ ವ್ಯಕ್ತಪಡಿಸಿದ್ದು, ಇದಾಗ್ಯೂ ಎಸಿಸಿ ಮುಖ್ಯಸ್ಥ ತನ್ನ ಪಟ್ಟನ್ನು ಸಡಿಲಿಸಿಲ್ಲ ಎಂದು ತಿಳಿದು ಬಂದಿದೆ. ಹೀಗಾಗಿ ಏಷ್ಯಾಕಪ್ ವಿವಾದ ಸದ್ಯಕ್ಕಂತು ಮುಗಿಯುವ ಸಾಧ್ಯತೆಯಿಲ್ಲ.