ನಿಂತಿದ್ದ ಕ್ಯಾಂಟರ್ಗೆ ಟ್ಯಾಂಕರ್ ಢಿಕ್ಕಿ: ಚಾಲಕ ಪಾರಾಗಿದ್ದೇ ಪವಾಡ
ಕ್ಯಾಂಟರ್ಗೆ ಟ್ಯಾಂಕರ್ ಢಿಕ್ಕಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ನಡೆದಿದೆ. ಆಯುಧ ಪೂಜೆ ದಿನವೇ ನಡೆದ ಈ ಅಪಘಾತದಲ್ಲಿ ಕ್ಯಾಂಟರ್ ಚಾಲಕ ಪವಾಡ ಸದೃಶ ರೀತಿ ಪಾರಾಗಿದ್ದಾನೆ. ಅಪಘಾತದಲ್ಲಿ ಟ್ಯಾಂಕರ್ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಚಿಕ್ಕಬಳ್ಳಾಪುರ, ಅಕ್ಟೋಬರ್ 01: ನಿಂತಿದ್ದ ಕ್ಯಾಂಟರ್ಗೆ ಟ್ಯಾಂಕರ್ ಢಿಕ್ಕಿಯಾಗಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ನಂದಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ನಡೆದಿದೆ. ಘಟನೆಯಲ್ಲಿ ಪವಾಡ ಸದೃಶ ರೀತಿ ಕ್ಯಾಂಟರ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಟ್ಯಾಂಕರ್ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಅಪಘಾತ ಹಿನ್ನಲೆ ಸ್ಥಳದಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದಾರೆ.
ಇನ್ನಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Oct 01, 2025 05:52 PM
Latest Videos
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು

