ರಾಷ್ಟ್ರಧ್ವಜದ ವಿರುದ್ಧ ಯಾರೂ ನಿಲುವು ತಳೆಯುವ ದುಸ್ಸಾಹಸಕ್ಕೆ ಕುಮಾರಸ್ವಾಮಿ ಕೈ ಹಾಕಿದ್ದಾರೆ: ಎನ್ ಚಲುವರಾಯಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ

Updated on: Jan 30, 2024 | 2:06 PM

ಕುಮಾರಸ್ವಾಮಿಯವರು ನಿನ್ನೆ ಬಿಜೆಪಿ ನಾಯಕರೊಂದಿಗೆ ಸೇರಿ ತಿರಂಗದ ವಿರುದ್ಧ ನಿಲುವು ತಳೆದು ಮಂಡ್ಯದ ಅಮಾಯಕ ಯುವಕರನ್ನು ದಿಕ್ಕುತಪ್ಪಿಸುವ, ಅವರ ನೆಮ್ಮದಿ ಹಾಳುಮಾಡುವ ಪ್ರಯತ್ನ ಮಾಡಿದ್ದಾರೆ, ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿಗೆ ಇದು ಶೋಭೆ ನೀಡಲ್ಲ ಎಂದು ಚಲುವರಾಯ ಸ್ವಾಮಿ ಹೇಳಿದರು

ಮಂಡ್ಯ: ಮಂಡ್ಯದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತಾಡಿದ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ (N Cheluvarayaswamy), ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಧೋರಣೆಗಳನ್ನು ಕಟುವಾಗಿ ಟೀಕಿಸಿದರು. ರಾಷ್ಟ್ರಧ್ವಜ (National Flag) ಹಾರಿಸಿದ್ದು ತಪ್ಪು ಅಂತ ಅವರು ಬಿಜೆಪಿ ನಾಯಕರ ಜೊತೆ ಸೇರಿ ಹೋರಾಟ ಮಾಡುತ್ತಿದ್ದಾರೆ. ಸ್ವಾತಂತ್ರ್ಯ ಬಂದು ಇಷ್ಟು ವರ್ಷ ಕಳೆದರೂ ದೇಶದ ಯಾವುದೇ ಮೂಲೆಯಲ್ಲಿ ಯಾವುದೇ ಒಂದು ಗ್ರಾಮದಲ್ಲಿ ಒಬ್ಬೇಒಬ್ಬ ವ್ಯಕ್ತಿ ರಾಷ್ಟ್ರಧ್ವಜ ವಿರುದ್ಧ ಇದುವರೆಗೆ ಮಾತಾಡಿರಲಿಲ್ಲ. ಆದರೆ, ಕೆರೆಗೋಡು ಹನುಮ ಬಾವುಟ ತೆರವುಗೊಳಿಸಿದ ಪ್ರಕರಣದಲ್ಲಿ ಕುಮಾರಸ್ವಾಮಿಯವರು ನಿನ್ನೆ ಬಿಜೆಪಿ ನಾಯಕರೊಂದಿಗೆ ಸೇರಿ ತಿರಂಗದ ವಿರುದ್ಧ ನಿಲುವು ತಳೆದು ಮಂಡ್ಯದ ಅಮಾಯಕ ಯುವಕರನ್ನು ದಿಕ್ಕುತಪ್ಪಿಸುವ, ಅವರ ನೆಮ್ಮದಿ ಹಾಳುಮಾಡುವ ಪ್ರಯತ್ನ ಮಾಡಿದ್ದಾರೆ, ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿಗೆ ಇದು ಶೋಭೆ ನೀಡಲ್ಲ ಎಂದು ಚಲುವರಾಯ ಸ್ವಾಮಿ ಹೇಳಿದರು. ಅವರು ಎರಡೂ ಸಲ ಮುಖ್ಯಮಂತ್ರಿ ಆಗುವಲ್ಲಿ ಮಂಡ್ಯದ ಪಾತ್ರ ಬಹಳ ದೊಡ್ಡದು, ಅವರು ತಮ್ಮ ಅಂತರಾತ್ಮವನ್ನು ಕೇಳಿಕೊಳ್ಳಲಿ, ಇಲ್ಲ ಅಂತ ಅವರು ಹೇಳುವುದಾದರೆ ಅದನ್ನು ತಮ್ಮ ಎದೆ ಮುಟ್ಟಿಕೊಂಡು ಹೇಳಲಿ ಎಂದು ಚಲುವರಾಯಸ್ವಾಮಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.