ದಯವಿಟ್ಟು ಇದನ್ನು ಗಮನಿಸಿ: ಸ್ವಚ್ಛತೆಗಾಗಿ ಅಧಿಕಾರಿಗಳು, ಪ್ರತಿನಿಧಿಗಳಿಗೆ ಅನಿರುದ್ಧ್ ಮನವಿ

Updated on: Sep 21, 2025 | 10:05 AM

ಕನ್ನಡದ ನಟ ಅನಿರುದ್ಧ್ ಅವರಿಗೆ ಸಾಮಾಜಿಕ ಕಾಳಜಿ ಇದೆ. ಸಾಮಾಜಿಕ ಜಾಲತಾಣದಲ್ಲಿ ಆಗಾಗ ಅವರು ಈ ಕುರಿತು ಮಾತನಾಡುತ್ತಾರೆ. ಬೆಂಗಳೂರಿನ ಸ್ವಚ್ಛತೆಯ ಕುರಿತು ಸ್ಥಳೀಯರಲ್ಲಿ ಮತ್ತು ಅಧಿಕಾರಿಗಳಲ್ಲಿ ಅನಿರುದ್ಧ್ ಮನವಿ ಮಾಡುತ್ತಾರೆ. ಕಸದ ರಾಶಿ ಕಂಡರೆ ಅದರ ವಿಡಿಯೋ ಹಂಚಿಕೊಂಡು ಬದಲಾವಣೆಗಾಗಿ ಕರೆ ನೀಡುತ್ತಾರೆ.

ನಟ ಅನಿರುದ್ಧ್ ಜತ್ಕರ್ (Anirudh Jatkar) ಅವರು ಸಾಮಾಜಿಕ ಕಾಳಜಿ ಹೊಂದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅವರು ಆಗಾಗ ಈ ಕುರಿತು ಮಾತನಾಡುತ್ತಾರೆ. ಬೆಂಗಳೂರಿನ ಸ್ವಚ್ಛತೆಯ ಬಗ್ಗೆ ಸ್ಥಳೀಯರಲ್ಲಿ ಹಾಗೂ ಅಧಿಕಾರಿಗಳಲ್ಲಿ ಅನಿರುದ್ಧ್ ಮನವಿ ಮಾಡುತ್ತಾರೆ. ಎಲ್ಲಿಯೇ ಕಸದ ರಾಶಿ ಕಂಡರೂ ಕೂಡ ಅದರ ವಿಡಿಯೋ ಹಂಚಿಕೊಂಡು ಬದಲಾವಣೆಗಾಗಿ ಕರೆ ನೀಡುತ್ತಾರೆ. ಈಗ ಅವರು ಲಾಲ್​ಬಾಗ್ (Lalbagh) ಎದುರಿನ ಸ್ವಚ್ಛತೆಗಾಗಿ ಈ ವಿಡಿಯೋ ಪೋಸ್ಟ್ ಮಾಡಿದ್ದಾರೆ. ‘ಸ್ಥಳೀಯರಲ್ಲಿ, ಅಧಿಕಾರಿಗಳಲ್ಲಿ, ಜನ ಪ್ರತಿನಿಧಿಗಳಲ್ಲಿ ಕೈ ಮುಗಿದು ಕಳಕಳಿಯಿಂದ ಕೇಳಿಕೊಳ್ಳುತ್ತೇವೆ. ಈ ಬಗ್ಗೆ ಗಮನ ಹರಿಸಿ, ಸ್ವಚ್ಛಗೊಳಿಸಿ. ನಾವು ಬೇರೆ ದೇಶಗಳಿಗೆ ಮಾದರಿ ಆಗೋಣ’ ಎಂದು ಅನಿರುದ್ಧ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More