AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ

ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ

ರಾಜೇಶ್ ದುಗ್ಗುಮನೆ
|

Updated on: Jul 02, 2024 | 8:02 AM

Share

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್, ಪವಿತ್ರಾ, ವಿನಯ್ ಮೊದಲಾದವರು ಅರೆಸ್ಟ್ ಆಗಿದ್ದಾರೆ. ದರ್ಶನ್ ಅವರು ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಇದ್ದಾರೆ. ಅವರನ್ನು ನೋಡಲು ಜುಲೈ 1ರಂದು ಕುಟುಂಬದವರು ತೆರಳಿದ್ದರು. ಈ ವೇಳೆ ಅವರು ಕಣ್ಣೀರು ಹಾಕಿದ್ದಾರೆ ಎಂದು ವರದಿ ಆಗಿದೆ.

ನಟ ದರ್ಶನ್ ಅವರು ಕಳೆದ ಕೆಲವು ದಿನಗಳಿಂದ ಜೈಲಿನಲ್ಲಿದ್ದಾರೆ. ಕೇಂದ್ರ ಕಾರಾಗೃಹದಲ್ಲಿ ಅವರು ಉಳಿದುಕೊಂಡಿದ್ದಾರೆ. ಅವರನ್ನು ನೋಡಲು ಜುಲೈ 1ರಂದು ತಾಯಿ ಮೀನಾ ಹಾಗೂ ಸಹೋದರ ದಿನಕರ್ ತೂಗುದೀಪ ಅವರು ಆಗಮಿಸಿದ್ದರು. ಈ ವೇಳೆ ದರ್ಶನ್ ಅವರನ್ನು ನೋಡುತ್ತಿದ್ದಂತೆ ಮೀನಾ ಕಣ್ಣೀರು ಹಾಕಿದ್ದಾರೆ. ಇಬ್ಬರೂ ಅಪ್ಪಿಕೊಂಡು ಗಳಗಳನೆ ಅತ್ತಿದ್ದಾರೆ ಎಂದು ವರದಿ ಆಗಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಅವರು ಜೈಲು ಸೇರಿದ್ದಾರೆ. ಈ ಪ್ರಕರಣದಲ್ಲಿ ಅವರು ಎ2 ಆರೋಪಿ ಆಗಿದ್ದಾರೆ. ಪವಿತ್ರಾ ಗೌಡ ಎ1 ಆರೋಪಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More