ನಟ ದರ್ಶನ್ ಅವರು ಕಳೆದ ಕೆಲವು ದಿನಗಳಿಂದ ಜೈಲಿನಲ್ಲಿದ್ದಾರೆ. ಕೇಂದ್ರ ಕಾರಾಗೃಹದಲ್ಲಿ ಅವರು ಉಳಿದುಕೊಂಡಿದ್ದಾರೆ. ಅವರನ್ನು ನೋಡಲು ಜುಲೈ 1ರಂದು ತಾಯಿ ಮೀನಾ ಹಾಗೂ ಸಹೋದರ ದಿನಕರ್ ತೂಗುದೀಪ ಅವರು ಆಗಮಿಸಿದ್ದರು. ಈ ವೇಳೆ ದರ್ಶನ್ ಅವರನ್ನು ನೋಡುತ್ತಿದ್ದಂತೆ ಮೀನಾ ಕಣ್ಣೀರು ಹಾಕಿದ್ದಾರೆ. ಇಬ್ಬರೂ ಅಪ್ಪಿಕೊಂಡು ಗಳಗಳನೆ ಅತ್ತಿದ್ದಾರೆ ಎಂದು ವರದಿ ಆಗಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಅವರು ಜೈಲು ಸೇರಿದ್ದಾರೆ. ಈ ಪ್ರಕರಣದಲ್ಲಿ ಅವರು ಎ2 ಆರೋಪಿ ಆಗಿದ್ದಾರೆ. ಪವಿತ್ರಾ ಗೌಡ ಎ1 ಆರೋಪಿ ಆಗಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.