Darshan: ಅರ್ಜುನ ಆನೆಯ ಸ್ಮಾರಕ ನಿರ್ಮಾಣಕ್ಕೆ ನೆರವಾದ ದರ್ಶನ್

Updated on: May 23, 2024 | 10:59 AM

ಕಾಡಾನೆ ಕಾರ್ಯಾಚರಣೆ ವೇಳೆ ಮೃತಪಟ್ಟ ದಸರಾ ಆನೆ ಅರ್ಜುನನ ಸ್ಮಾರಕ‌ ನಿರ್ಮಾಣಕ್ಕೆ ದರ್ಶನ್ ನೆರವು ನೀಡಿದ್ದಾರೆ. ಸ್ಮಾರಕ ನಿರ್ಮಾಣಕ್ಕೆ ಬೇಕಾದಷ್ಟು ಸ್ಲ್ಯಾಬ್ ಕಲ್ಲುಗಳನ್ನು ಅವರು ಕಳುಹಿಸಿದ್ದಾರೆ. ಸಕಲೇಶಪುರದ ಯಸಳೂರು ಸಮೀಪದ ದಬ್ಬಳ್ಳಿ ಕಟ್ಟೆ ನೆಡುತೋಪಿಗೆ ಕಲ್ಲುಗಳು ತಲುಪಿವೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅವರಿಗೆ ಪ್ರಾಣಿಗಳ ಬಗ್ಗೆ ಇರೋ ಪ್ರಿತಿ ತುಂಬಾನೇ ವಿಶೇಷವಾದುದ್ದು. ಅವರು ಈಗಾಗಲೇ ಮೈಸೂರಿನ ಮೃಗಾಲಯದ ಪ್ರಾಣಿಗಳನ್ನು ದತ್ತು ಪಡೆದು ಸಾಕುತ್ತಿದ್ದಾರೆ. ಕಾಡಾನೆ ಕಾರ್ಯಾಚರಣೆ ವೇಳೆ ಮೃತಪಟ್ಟ ದಸರಾ ಆನೆ ಅರ್ಜುನನ ಸ್ಮಾರಕ‌ ನಿರ್ಮಾಣಕ್ಕೆ ದರ್ಶನ್ ನೆರವು ನೀಡಿದ್ದಾರೆ. ಸ್ಮಾರಕ ನಿರ್ಮಾಣಕ್ಕೆ ಬೇಕಾದಷ್ಟು ಸ್ಲ್ಯಾಬ್ ಕಲ್ಲುಗಳನ್ನು ಅವರು ಕಳುಹಿಸಿದ್ದಾರೆ. ಸಕಲೇಶಪುರದ ಯಸಳೂರು ಸಮೀಪದ ದಬ್ಬಳ್ಳಿ ಕಟ್ಟೆ ನೆಡುತೋಪಿಗೆ ಕಲ್ಲುಗಳು ತಲುಪಿವೆ. ಅರ್ಜುನ ಮೃತಪಟ್ಟ ವೇಳೆ ಸ್ಮಾರಕ ನಿರ್ಮಾಣಕ್ಕೆ ನೆರವು ನೀಡುವುದಾಗಿ ಡಿ ಬಾಸ್ ಮಾತು ಕೊಟ್ಟಿದ್ದರು. ಈ ಮಾತನ್ನು ಅವರು ಉಳಿಸಿಕೊಂಡಿದ್ದಾರೆ. ಕಲ್ಲನ್ನು ಸಮಾಧಿ ಸ್ಥಳಕ್ಕೆ ಪ್ರಯಾಸದಿಂದ ಸಾಗಿಸಿರೋ ಬಗ್ಗೆ ವೀಡಿಯೋ ಮಾಡಿ ಆಪ್ತರು ಶೇರ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More