ದರ್ಶನ್ ಜಾಮೀನು ರದ್ದಿಗೆ ಅರ್ಜಿ; ವಿಚಾರಣೆಯ ಲೈವ್ ವಿಡಿಯೋ ಇಲ್ಲಿದೆ

Updated on: Jul 24, 2025 | 12:06 PM

ಬೆನ್ನು ನೋವಿನ ಕಾರಣ ನೀಡಿ ದರ್ಶನ್ ಅವರು ಮಧ್ಯಂತರ ಜಾಮೀನು ಪಡೆದರು. ಆ ಬಳಿಕ ಅವರಿಗೆ ಸಂಪೂರ್ಣ ಜಾಮೀನು ದೊರೆತಿತ್ತು. ಇದನ್ನು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ನಲ್ಲಿ ಪ್ರಶ್ನೆ ಮಾಡಿತ್ತು. ಈಗ ಈ ಬಗ್ಗೆ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ತನ್ನ ತೀರ್ಪನ್ನು ನೀಡಿದೆ.

ನಟ ದರ್ಶನ್ ಅವರ ಜಾಮೀನು ರದ್ದು ಮಾಡಬೇಕು ಎಂದು ಸುಪ್ರೀಂಕೋರ್ಟ್​ಗೆ ಕರ್ನಾಟಕ ಸರ್ಕಾರಿ ಮನವಿ ಸಲ್ಲಿಸಿದೆ. ಈ ಅರ್ಜಿಯ ವಿಚಾರಣೆ ಸದ್ಯ ಸುಪ್ರೀಂಕೋರ್ಟ್​ನಲ್ಲಿ ನಡೆಯುತ್ತಿದೆ. ಸರ್ಕಾರದ ಪರ ಸಿದ್ದಾರ್ಥ್ ಲೂತ್ರಾ ಅವರು ವಾದ ಮಾಡುತ್ತಿದ್ದರು. ಅಂದು ನಡೆದ ಘಟನೆ ಬಗ್ಗೆ ಜಡ್ಜ್​ಗೆ ಅವರು ಎಲ್ಲವನ್ನೂ ವಿವರಿಸಿದ್ದಾರೆ. ಲೈವ್ ಹಿರಿಯಿಂಗ್​ನ ಅಪ್​ಡೇಟ್ ಈ ವಿಡಿಯೋದಲ್ಲಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Jul 24, 2025 12:01 PM
Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More