ಹೆಣ್ಣುಮಕ್ಕಳ ಬಳಿ ದರ್ಶನ್ ಕ್ಷಮೆ ಕೇಳಬೇಕು; ಗೌಡತಿಯರ ಸೇನೆ ಆಗ್ರಹ

Updated on: Feb 22, 2024 | 3:17 PM

‘ಬೆಳ್ಳಿ ಪರ್ವ ಡಿ-25’ ಸಮಾರಂಭ ಇತ್ತೀಚೆಗೆ ಶ್ರೀರಂಗಪಟ್ಟಣದಲ್ಲಿ ನಡೆಯಿತು. ಈ ವೇಳೆ  ದರ್ಶನ್ ಅವರು ವೇದಿಕೆ ಮೇಲೆ ಮಾತನಾಡಿದ್ದರು. ದರ್ಶನ್​ ಅವರು ಮಹಿಳೆಯರ ಬಗ್ಗೆ ಆಡಿದ ಮಾತುಗಳಿಗೆ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಗೌಡತಿಯರ ಸೇನೆ ದರ್ಶನ್ ಮಾತಿಗೆ ವಿರೋಧ ವ್ಯಕ್ತಪಡಿಸಿದೆ. ದರ್ಶನ್ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದೆ.

‘ಬೆಳ್ಳಿ ಪರ್ವ ಡಿ-25’ ಸಮಾರಂಭ ಇತ್ತೀಚೆಗೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಈ ವೇಳೆ  ನಟ ದರ್ಶನ್ (Darshan) ಅವರು ವೇದಿಕೆ ಮೇಲೆ ಮಾತನಾಡಿದ್ದರು. ದರ್ಶನ್​ ಅವರು ಮಹಿಳೆಯರ ಬಗ್ಗೆ ಆಡಿದ ಮಾತುಗಳಿಗೆ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಗೌಡತಿಯರ ಸೇನೆ ದರ್ಶನ್ ಮಾತಿಗೆ ವಿರೋಧ ವ್ಯಕ್ತಪಡಿಸಿದೆ. ‘ದರ್ಶನ್ ಅವರು ಈ ರೀತಿ ಉಡಾಫೆ ಆಗಿ ಮಾತನಾಡುವ ಅವಶ್ಯಕತೆ ಏನಿತ್ತು? ಈ ರೀತಿ ಮಾತುಗಳನ್ನು ನಾವು ಏಕೆ ಕೇಳಬೇಕು. ಈ ರೀತಿಯ ಮಾತುಗಳನ್ನು ದರ್ಶನ್ ಏಕೆ ಹೇಳಬೇಕಿತ್ತು ಎಂಬ ಬಗ್ಗೆ ವಿವರಣೆ ನೀಡಬೇಕು. ಅಲ್ಲದೆ ಹೆಣ್ಣುಮಕ್ಕಳ ಬಳಿ ಕ್ಷಮೆ ಕೇಳಬೇಕು’ ಎಂದು ಗೌಡತಿಯರ ಸೇನೆ ಆಗ್ರಹಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More