‘ದರ್ಶನ್​​ಗೆ ಬೆನ್ನು ನೋವು ಬಂದಿದ್ದು ಇಂದು ನಿನ್ನೆಯಲ್ಲ’; ವಕೀಲರ ಸ್ಪಷ್ಟನೆ

Updated on: Oct 30, 2024 | 1:22 PM

ನಟ ದರ್ಶನ್ ಅವರು ಅನಾರೋಗ್ಯದ ಕಾರಣ ನೀಡಿ ಜಾಮೀನು ಪಡೆದಿದ್ದಾರೆ. ಕರ್ನಾಟಕ ಹೈಕೋರ್ಟ್ ದರ್ಶನ್ ಅವರಿಗೆ ಜಾಮೀನು ಮಂಜೂರು ಮಾಡಿದೆ. ಈ ಬೆನ್ನಲ್ಲೇ ದರ್ಶನ್ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಈ ಮಧ್ಯೆ ದರ್ಶನ್​ಗೆ ಬೆನ್ನು ನೋವಿನ ಸಮಸ್ಯೆ ಇರೋದು ಇಂದು ನಿನ್ನೆಯಿಂದ ಅಲ್ಲ ಎಂಬುದನ್ನು ವೈದ್ಯರು ಹೇಳಿದ್ದಾರೆ.

ದರ್ಶನ್ ಅವರು ಜಾಮೀನು ಪಡೆಯಲೆಂದೇ ಬೆನ್ನು ನೋವಿನ ನಾಟಕ ಆಡಿದರು ಎಂದು ಅನೇಕರು ಮಾತನಾಡಿಕೊಂಡಿದ್ದು ಇದೆ. ಈ ವಿಚಾರವಾಗಿ ಅವರ ವಕೀಲರು ಸ್ಪಷ್ಟನೆ ಕೊಟ್ಟಿದ್ದಾರೆ. ‘ದರ್ಶನ್​ಗೆ ಬೆನ್ನು ನೋವು ಇಂದು ನಿನ್ನೆ ಬಂದಿದ್ದಲ್ಲ. 2022-23ರಿಂದ ಈ ಸಮಸ್ಯೆ ಇದೆ. ಅದಕ್ಕೆ ಸಂಬಂಧಿಸಿದ ದಾಖಲೆ ಸಲ್ಲಿಸಿದ್ದೇವೆ. ಹೀಗಾಗಿ ಜಾಮೀನು ಸಿಕ್ಕಿದೆ’ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More