ಹಣೆಗೆ ಕುಂಕುಮ ಇಟ್ಟುಕೊಂಡು ಕೋರ್ಟ್ ವಿಚಾರಣೆಗೆ ದರ್ಶನ್ ಹಾಜರು; ಕಿಕ್ಕಿರಿದ ವಕೀಲರು

Updated on: Nov 03, 2025 | 3:10 PM

ನಟ ದರ್ಶನ್ ಅವರ ವಿರುದ್ಧ ಅನೇಕ ಆರೋಪಗಳಿವೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಪ್ರಮುಖ ಆರೋಪಿ ಆಗಿದ್ದಾರೆ. ಇಂದು (ನ.3) ದೋಷಾರೋಪಣೆ ನಿಗದಿ ಮಾಡಲಾಗುತ್ತಿದೆ. ಬೆಂಗಳೂರಿನ 64ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ವಿಚಾರಣೆಯಲ್ಲಿ ಹಾಜರಾಗಲು ದರ್ಶನ್ ಅವರು ಹಣೆಗೆ ಕುಂಕುಮ ಇಟ್ಟುಕೊಂಡು ಬಂದಿದ್ದಾರೆ.

ನಟ ದರ್ಶನ್ (Darshan) ಅವರ ವಿರುದ್ಧ ಹಲವು ಆರೋಪಗಳಿವೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅವರು ಪ್ರಮುಖ ಆರೋಪಿ ಆಗಿದ್ದಾರೆ. ಇಂದು (ನವೆಂಬರ್ 3) ದೋಷಾರೋಪಣೆ ನಿಗದಿ ಮಾಡಲಾಗುತ್ತಿದೆ. ಬೆಂಗಳೂರಿನ 64ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ವಿಚಾರಣೆಯಲ್ಲಿ ಹಾಜರಾಗಲು ದರ್ಶನ್ ಅವರು ಹಣೆಗೆ ಕುಂಕುಮ ಇಟ್ಟುಕೊಂಡು ಬಂದಿದ್ದಾರೆ. ಇಂದು ದರ್ಶನ್ ಪಾಲಿಗೆ ಮಹತ್ವದ ದಿನ. ಪವಿತ್ರಾ ಗೌಡ (Pavithra Gowda) ಸೇರಿದಂತೆ 17 ಮಂದಿ ಆರೋಪಿಗಳ ಮೇಲಿನ ದೋಷಾರೋಪಣೆ ನಿಗದಿ ಆಗಲಿದೆ. 4 ಗಂಟೆಗೆ ವಿಚಾರಣೆ ನಡೆಯಲಿದೆ. ಮುಚ್ಚಿದ ಕೊಠಡಿಯಲ್ಲಿ ವಿಚಾರಣೆ ನಡೆಸಲು ನ್ಯಾಯಾಧೀಶರು ನಿರ್ಧರಿಸಿದ್ದಾರೆ. ಕೋರ್ಟ್​​ ಹಾಲ್​​ನಲ್ಲಿ ವಕೀಲರು ಕಿಕ್ಕಿರಿದು ತುಂಬಿದ್ದರಿಂದ ಮುಚ್ಚಿದ ಕೊಠಡಿಯಲ್ಲಿ ವಿಚಾರಣೆ ನಡೆಸಲು ತೀರ್ಮಾನಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More