‘ಕಾಲಿಗೆ ಬಿದ್ದು ಕೇಳ್ಕೋತೀನಿ’; ಅಭಿಮಾನಿಗಳ ಬಳಿ ಡಿ ಬಾಸ್ ವಿಶೇಷ ಮನವಿ

Updated on: Mar 28, 2024 | 8:21 AM

ಮಾರ್ಚ್ 27ರಂದು ನೀನಾಸಂ ಸತೀಶ್ ಹಾಗೂ ರಚಿತಾ ರಾಮ್ ನಟನೆಯ ‘ಮ್ಯಾಟ್ನಿ’ ಸಿನಿಮಾದ ಟ್ರೇಲರ್ ಲಾಂಚ್ ಬೆಂಗಳೂರಲ್ಲಿ ನಡೆದಿದೆ. ಇದಕ್ಕೆ ದರ್ಶನ್ ಅವರು ವಿಶೇಷ ಅತಿಥಿ ಆಗಿ ಆಗಮಿಸಿದ್ದರು. ಅವರು ವೇದಿಕೆ ಏರುತ್ತಿದ್ದಂತೆ ಫ್ಯಾನ್ಸ್ ಕಿರುಚೋಕೆ ಆರಂಭಿಸಿದರು.

ನಟ ದರ್ಶನ್ (Darshan) ಅವರಿಗೆ ಇರೋ ಅಭಿಮಾನಿ ಬಳಗ ತುಂಬಾನೇ ದೊಡ್ಡದು. ಅವರು ಯಾವುದೇ ವೇದಿಕೆ ಏರಿದರೂ ಅಭಿಮಾನಿಗಳ ಕೂಗಾಟ ಜೋರಿರುತ್ತದೆ. ಮಾರ್ಚ್ 27ರಂದು ನೀನಾಸಂ ಸತೀಶ್ ಹಾಗೂ ರಚಿತಾ ರಾಮ್ ನಟನೆಯ ‘ಮ್ಯಾಟ್ನಿ’ ಸಿನಿಮಾದ ಟ್ರೇಲರ್ ಲಾಂಚ್ ಬೆಂಗಳೂರಲ್ಲಿ ನಡೆದಿದೆ. ಇದಕ್ಕೆ ದರ್ಶನ್ ಅವರು ವಿಶೇಷ ಅತಿಥಿ ಆಗಿ ಆಗಮಿಸಿದ್ದರು. ಅವರು ವೇದಿಕೆ ಏರುತ್ತಿದ್ದಂತೆ ಫ್ಯಾನ್ಸ್ ಕಿರುಚೋಕೆ ಆರಂಭಿಸಿದರು. ಈ ವೇಳೆ ಅಭಿಮಾನಿಗಳ ಬಳಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ‘ಮೊದಲು ನಾನು ಮಾತನಾಡುತ್ತೇನೆ. ಆ ಬಳಿಕ ನೀವು ಕಿರುಚಿ. ಕಾಲಿಗೆ ಬಿದ್ದು ಕೇಳ್ಕೋತಿನಿ’ ಎಂದು ಅಭಿಮಾನಿಗಳ ಬಳಿ ಅವರು ಕೋರಿದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More