ದರ್ಶನ್​ಗೆ ನಡೆದಾಡಲು ಮಗನ ಆಸರೆ; ಕುಂಟುತ್ತಲೇ ಕಾರು ಏರಿದ ನಟ

Updated on: Dec 18, 2024 | 11:32 AM

ನಟ ದರ್ಶನ್ ಅವರಿಗೆ ತೀವ್ರ ಬೆನ್ನು ನೋವು ಕಾಡಿದೆ. ಇದರಿಂದ ಹೊರ ಬರಲು ಅವರಿಗೆ ಶಸ್ತ್ರಚಿಕಿತ್ಸೆ ಅಗತ್ಯ ಇದೆ ಎಂದು ಹೇಳಲಾಗಿತ್ತು. ಆದರೆ, ಈಗ ಅವರು ಸರ್ಜರಿ ಮಾಡಿಸಿಕೊಳ್ಳದೆ ಆಸ್ಪತ್ರೆಯಿಂದ ಹೊರ ಬಂದಿದ್ದಾರೆ. ಆ ಸಂದರ್ಭದ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ.

ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಬಂಧನಕ್ಕೆ ಒಳಗಾದರು. ಅವರು ಬೆನ್ನು ನೋವಿನ ಕಾರಣ ನೀಡಿ ಆಸ್ಪತ್ರೆಯಿಂದ ಅವರು ಮಧ್ಯಂತರ ಜಾಮೀನು ಪಡೆದರು. ಈಗ ಆಸ್ಪತ್ರೆಯಿಂದ ಅವರು ಹೊರ ಬಂದಿದ್ದಾರೆ. ಜಾಮೀನು ಪಡೆಯುತ್ತಿದ್ದಂತೆ ಸರ್ಜರಿ ಇಲ್ಲದೆ ಬಂದಿದ್ದಾರೆ. ಹಾಗಂತ ದರ್ಶನ್​ಗೆ ಬೆನ್ನು ನೋವು ಕಡಿಮೆ ಆಗಿಲ್ಲ. ಅವರು ಕುಂಟುತ್ತಲೇ ಸಾಗಿದ್ದಾರೆ. ಮಗನ ಆಸರೆ ಪಡೆದು ಕಾರು ಏರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More