‘ನನ್ನ ಸಿನಿಮಾಗಳನ್ನು ಗಿಮಿಕ್ ಮಾಡಿ ಪ್ರಚಾರ ಮಾಡುವ ಅವಶ್ಯಕತೆ ಇಲ್ಲ’: ಧನಂಜಯ
‘ಹೆಡ್ ಬುಷ್’ ಸಿನಿಮಾಗೆ ಈಗ ಜಯರಾಜ್ ಪುತ್ರ ಅಜಿತ್ ಜಯರಾಜ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದೆಲ್ಲವೂ ಪ್ರಚಾರದ ಗಿಮಿಕ್ ಎಂದು ಕೆಲವರು ಆರೋಪ ಮಾಡಿದ್ದಾರೆ. ಧನಂಜಯ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ‘
ಬೆಂಗಳೂರಿನ ಮಾಜಿ ಡಾನ್ ಜಯರಾಜ್ (Jayaraj) ಜೀವನ ಆಧರಿಸಿ ‘ಹೆಡ್ ಬುಷ್’ ಸಿನಿಮಾ (Headbush Movie) ತಯಾರಾಗುತ್ತಿದೆ. ಈ ಚಿತ್ರಕ್ಕೆ ಶೂನ್ಯ ನಿರ್ದೇಶನ ಮಾಡುತ್ತಿದ್ದು, ಅಗ್ನಿ ಶ್ರೀಧರ್ ಅವರ ‘ದಾದಾಗಿರಿಯ ದಿನಗಳು’ ಕೃತಿಯನ್ನು ಆಧರಿಸಿ ಈ ಚಿತ್ರ ಮೂಡಿಬರುತ್ತಿದೆ. ‘ಹೆಡ್ ಬುಷ್’ ಸಿನಿಮಾಗೆ ಈಗ ಜಯರಾಜ್ ಪುತ್ರ ಅಜಿತ್ ಜಯರಾಜ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದೆಲ್ಲವೂ ಪ್ರಚಾರದ ಗಿಮಿಕ್ ಎಂದು ಕೆಲವರು ಆರೋಪ ಮಾಡಿದ್ದಾರೆ. ಈ ಸಿನಿಮಾದಲ್ಲಿ ಜಯರಾಜ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ಧನಂಜಯ (Dhananjay) ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ನನ್ನ ಸಿನಿಮಾಗಳನ್ನು ಗಿಮಿಕ್ ಮಾಡಿ ಪ್ರಚಾರ ಮಾಡುವ ಯಾವುದೇ ಅವಶ್ಯಕತೆ ಇಲ್ಲ’ ಎಂದಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಕುರಿತು ಅಗ್ನಿ ಶ್ರೀಧರ್ ಅವರು ಪ್ರತಿಕ್ರಿಯೆ ನೀಡಿದ್ದರು. ತಾವು ಈ ಸಿನಿಮಾದಲ್ಲಿ ತೋರಿಸುತ್ತಿರುವ ವಿಷಯ ಏನು ಎಂಬುದುನ್ನು ಅವರು ವಿವರಿಸಿದ್ದರು. ಇದನ್ನು ಪ್ರಶ್ನಿಸಲು ಅಜಿತ್ ಜಯರಾಜ್ಗೆ ಹಕ್ಕು ಇಲ್ಲ ಎಂದು ಅಗ್ನಿ ಶ್ರೀಧರ್ ಹೇಳಿದ್ದರು.

‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ

ಸಾಧಾರಣ ಮೊತ್ತ ಗಳಿಸಿದ ಆರ್ಸಿಬಿ, ಬೌಲರ್ಗಳ ಮೇಲೆ ಹೆಚ್ಚಿನ ನಿರೀಕ್ಷೆ!

ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್ಗೆ

ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
