ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ ಜೈಲು ಸೇರಿದ್ದಾರೆ. ಈ ಹಿಂದೆ ಪ್ರಕರಣವೊಂದರಲ್ಲಿ ಜೈಲು ಸೇರಿದ್ದ ನಟ ಹರೀಶ್ ರಾಯ್, ಹಿಂದೊಮ್ಮೆ ದರ್ಶನ್ ತಮಗೆ ಮಾಡಿದ್ದ ಸಹಾಯ ನೆನಪಿಸಿಕೊಂಡಿದ್ದಾರೆ.

ನಟ ದರ್ಶನ್, ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿದ್ದಾರೆ. ಈ ಸಂದರ್ಭದಲ್ಲಿ ಸಿನಿಮಾ ನಟರು ಒಬ್ಬೊಬ್ಬರು ಒಂದೊಂದು ರೀತಿ ಮಾತನಾಡುತ್ತಿದ್ದಾರೆ. ಕೆಲವರು ದರ್ಶನ್ ಪರ ನಿಂತಿದ್ದರೆ, ಕೆಲವರು ದರ್ಶನ್ ವಿರುದ್ಧ ಮಾತನಾಡಿದ್ದಾರೆ. ಕೆಲವರು ಮೌನವಾಗಿ ಉಳಿದಿದ್ದಾರೆ. ಕನ್ನಡ ಸಿನಿಮಾಗಳಲ್ಲಿ ಬ್ಯಾಡ್ ಬಾಯ್ ಆಗಿ ಗುರುತಿಸಿಕೊಂಡಿರುವ ನಟ ಹರೀಶ್ ರಾಯ್ ಸಹ ಈ ಹಿಂದೆ ಪ್ರಕರಣವೊಂದರಲ್ಲಿ ಜೈಲು ಸೇರಿದ್ದರು. ಟಿವಿ9 ಜೊತೆಗೆ ಮಾತನಾಡಿರುವ ಹರೀಶ್ ರಾಯ್, ಹಿಂದೆ ತಮ್ಮ ಸಂಕಷ್ಟದ ಸಮಯದಲ್ಲಿ ದರ್ಶನ್ ತಮಗೆ ದೊಡ್ಡ ಮಟ್ಟದಲ್ಲಿ ಸಹಾಯ ಮಾಡಿದ್ದರು ಎಂದು ಹೇಳಿಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us