ಕನ್ನಡ ಚಿತ್ರರಂಗವನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ದ ಮೊದಲಿಗ ಸುದೀಪ್​ ಎಂದ ನಟ ಜಗ್ಗೇಶ್

ಸುದೀಪ್ ಈ ಮೊದಲು ಸಾಕಷ್ಟು ಪರಭಾಷೆಯ ಸಿನಿಮಾಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ. ಈ ಬಗ್ಗೆ ಜಗ್ಗೇಶ್ ಮಾತನಾಡಿದ್ದಾರೆ.

ಕನ್ನಡ ಚಿತ್ರರಂಗವನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ದ ಮೊದಲಿಗ ಸುದೀಪ್​ ಎಂದ ನಟ ಜಗ್ಗೇಶ್
| Updated By: ರಾಜೇಶ್ ದುಗ್ಗುಮನೆ

Updated on:Apr 21, 2022 | 4:09 PM

ಜಗ್ಗೇಶ್ (Jaggesh) ಹಾಗೂ ವಿಜಯ್ ಪ್ರಸಾದ್ ಕಾಂಬಿನೇಷನ್​ನ ‘ತೋತಾಪುರಿ’ ಸಿನಿಮಾ (Totapuri Movie) ಹಾಡಿನ ಮೂಲಕ ಸಾಕಷ್ಟು ಕುತೂಹಲ ಹುಟ್ಟುಹಾಕಿತ್ತು. ಈಗ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಈ ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್ ಅವರು (Kichcha Sudeep) ಮುಖ್ಯ ಅತಿಥಿಯಾಗಿ ಆಗಮಿಸಿ, ಟ್ರೇಲರ್ ರಿಲೀಸ್ ಮಾಡಿದರು. ಸುದೀಪ್ ತುಂಬಾನೇ ಕಷ್ಟದಿಂದ ಮೇಲೆ ಬಂದ ನಟ. ಈ ಬಗ್ಗೆ ಜಗ್ಗೇಶ್​ಗೆ ಹೆಮ್ಮೆ ಇದೆ. ಸುದೀಪ್ ಈ ಮೊದಲು ಸಾಕಷ್ಟು ಪರಭಾಷೆಯ ಸಿನಿಮಾಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ. ಈ ಬಗ್ಗೆ ಜಗ್ಗೇಶ್ ಮಾತನಾಡಿದ್ದಾರೆ. ‘ಕನ್ನಡ ಚಿತ್ರರಂಗವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ದ ಮೊದಲಿಗ ಸುದೀಪ್. ನಾವು ಅಂದು ಅಮಿತಾಭ್​ ಬಚ್ಚನ್​ ಅವರನ್ನು ನೋಡಬೇಕು ಎಂದು ಹಂಬಲಿಸುವಾಗಲೇ ಅವರ ಜತೆ ಸುದೀಪ್ ಹೋಗಿ ನಟಿಸಿ ಬಂದಿದ್ದ’ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ ಜಗ್ಗೇಶ್.

ಇದನ್ನೂ ಓದಿ: ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದ ನಟ ಜಗ್ಗೇಶ್​-ಪರಿಮಳಾ ಮದುವೆಗೆ ಈಗ 38 ವರ್ಷ; ಇಲ್ಲಿದೆ ಅಚ್ಚರಿಯ ಸ್ಟೋರಿ

Fact Check: ‘ಕೆಜಿಎಫ್ 2’ ಬಗ್ಗೆ ಸುದೀಪ್​ ರಿಯಾಕ್ಷನ್ ನೀಡಿದ್ದಾರೆ ಎಂಬ ವಿಡಿಯೋದ ಅಸಲಿಯತ್ತೇನು?

Published On - 2:54 pm, Thu, 21 April 22

Follow us