ದೇವನಾಂಪ್ರಿಯ ಚಿತ್ರದ ನಟ ಅದರ ನಿರ್ದೇಶಕನ ಕಡೆ ಗುಂಡು ಹಾರಿಸಿದ್ದು ಯಾಕೆ ಗೊತ್ತಾ?
ತಾಂಡವರಾಮ್ ಹಾರಿಸಿದ ಗುಂಡು ನೆಲಕ್ಕೆ ಬಿದ್ದ ಕಾರಣ ಯಾವುದೇ ಅಪಾಯವಾಗಿಲ್ಲ. ಭರತ್ ಸಲ್ಲಿಸಿದ ದೂರಿನ ಮೇರೆಗೆ ಪೊಲೀಸರು ತಾಂಡವರಾಮ್ ನನ್ನು ವಶಕ್ಕೆ ಪಡೆದಿದ್ದಾರೆ. ಈತ ಚಿತ್ರ ನಿರ್ಮಾಣದಲ್ಲ್ಲಿ ಹಣ ಹೂಡಿದ್ದನಂತೆ, ಹಾಗಾಗಿ ಚಿತ್ರ ರಿಲೀಸ್ ವಿಳಂಬವಾದಂತೆ ತಳಮಳ ಶುರುವಾಗಿದೆ.
ಬೆಂಗಳೂರು: ನಗರದಲ್ಲಿ ನಿನ್ನೆ ಒಂದು ಶೂಟೌಟ್ ಪ್ರಕರಣ ನಡೆದಿದೆ ಮತ್ತು ಅದರ ವಿವರಗಳನ್ನು ನಮ್ಮ ಬೆಂಗಳೂರು ವರದಿಗಾರ ನೀಡಿದ್ದಾರೆ. ಇದು ದೇವನಾಂಪ್ರಿಯ ಹೆಸರಿನ ಇನ್ನೂ ಬಿಡುಗಡೆಯಾಗಬೇಕಿರುವ ಸಿನಿಮಾದ ವೃತ್ತಾಂತ. ಚಿತ್ರದ ನಟ ತಾಂಡವರಾಮ್, ನಿರ್ಮಾಪಕ ಕುಮಾರಸ್ವಾಮಿ ಮತ್ತು ನಿರ್ದೇಶಕ ಭರತ್ ಮೂವರ ನಡುವೆ ನಗರದ ಚಂದ್ರಾ ಲೇ ಔಟ್ ನಲ್ಲಿರುವ ಈ ಮನೆಯಲ್ಲಿ ಚಿತ್ರದ ರಿಲೀಸ್ಗೆ ಸಂಬಂಧಿಸಿದಂತೆ ನಡೆದ ಮಾತುಕತೆ ವಿಕೋಪಕ್ಕೆ ಹೋದಾಗ ತಾಂಡವರಾಮ್ ತನ್ನಲ್ಲಿದ್ದ ಲೈಸೆನ್ಸ್ಡ್ ಪಿಸ್ಟಲ್ನಿಂದ ಭರತ್ ನತ್ತ ಗುಂಡು ಹಾರಿಸಿದ್ದಾನೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ‘ಇದು ಪ್ರಚಾರದ ಗಿಮಿಕ್’; ಸಲ್ಮಾನ್ ಖಾನ್ ಮನೆಯ ಶೂಟೌಟ್ ಬಗ್ಗೆ ತಂದೆಯ ಪ್ರತಿಕ್ರಿಯೆ
Latest Videos
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್

