ದೇವನಾಂಪ್ರಿಯ ಚಿತ್ರದ ನಟ ಅದರ ನಿರ್ದೇಶಕನ ಕಡೆ ಗುಂಡು ಹಾರಿಸಿದ್ದು ಯಾಕೆ ಗೊತ್ತಾ?
ತಾಂಡವರಾಮ್ ಹಾರಿಸಿದ ಗುಂಡು ನೆಲಕ್ಕೆ ಬಿದ್ದ ಕಾರಣ ಯಾವುದೇ ಅಪಾಯವಾಗಿಲ್ಲ. ಭರತ್ ಸಲ್ಲಿಸಿದ ದೂರಿನ ಮೇರೆಗೆ ಪೊಲೀಸರು ತಾಂಡವರಾಮ್ ನನ್ನು ವಶಕ್ಕೆ ಪಡೆದಿದ್ದಾರೆ. ಈತ ಚಿತ್ರ ನಿರ್ಮಾಣದಲ್ಲ್ಲಿ ಹಣ ಹೂಡಿದ್ದನಂತೆ, ಹಾಗಾಗಿ ಚಿತ್ರ ರಿಲೀಸ್ ವಿಳಂಬವಾದಂತೆ ತಳಮಳ ಶುರುವಾಗಿದೆ.
ಬೆಂಗಳೂರು: ನಗರದಲ್ಲಿ ನಿನ್ನೆ ಒಂದು ಶೂಟೌಟ್ ಪ್ರಕರಣ ನಡೆದಿದೆ ಮತ್ತು ಅದರ ವಿವರಗಳನ್ನು ನಮ್ಮ ಬೆಂಗಳೂರು ವರದಿಗಾರ ನೀಡಿದ್ದಾರೆ. ಇದು ದೇವನಾಂಪ್ರಿಯ ಹೆಸರಿನ ಇನ್ನೂ ಬಿಡುಗಡೆಯಾಗಬೇಕಿರುವ ಸಿನಿಮಾದ ವೃತ್ತಾಂತ. ಚಿತ್ರದ ನಟ ತಾಂಡವರಾಮ್, ನಿರ್ಮಾಪಕ ಕುಮಾರಸ್ವಾಮಿ ಮತ್ತು ನಿರ್ದೇಶಕ ಭರತ್ ಮೂವರ ನಡುವೆ ನಗರದ ಚಂದ್ರಾ ಲೇ ಔಟ್ ನಲ್ಲಿರುವ ಈ ಮನೆಯಲ್ಲಿ ಚಿತ್ರದ ರಿಲೀಸ್ಗೆ ಸಂಬಂಧಿಸಿದಂತೆ ನಡೆದ ಮಾತುಕತೆ ವಿಕೋಪಕ್ಕೆ ಹೋದಾಗ ತಾಂಡವರಾಮ್ ತನ್ನಲ್ಲಿದ್ದ ಲೈಸೆನ್ಸ್ಡ್ ಪಿಸ್ಟಲ್ನಿಂದ ಭರತ್ ನತ್ತ ಗುಂಡು ಹಾರಿಸಿದ್ದಾನೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ‘ಇದು ಪ್ರಚಾರದ ಗಿಮಿಕ್’; ಸಲ್ಮಾನ್ ಖಾನ್ ಮನೆಯ ಶೂಟೌಟ್ ಬಗ್ಗೆ ತಂದೆಯ ಪ್ರತಿಕ್ರಿಯೆ
Follow Us
Latest Videos
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
