ದೇವನಾಂಪ್ರಿಯ ಚಿತ್ರದ ನಟ ಅದರ ನಿರ್ದೇಶಕನ ಕಡೆ ಗುಂಡು ಹಾರಿಸಿದ್ದು ಯಾಕೆ ಗೊತ್ತಾ?

ಅರುಣ್​ ಕುಮಾರ್​ ಬೆಳ್ಳಿ

Updated on: Nov 19, 2024 | 7:51 PM

ತಾಂಡವರಾಮ್ ಹಾರಿಸಿದ ಗುಂಡು ನೆಲಕ್ಕೆ ಬಿದ್ದ ಕಾರಣ ಯಾವುದೇ ಅಪಾಯವಾಗಿಲ್ಲ. ಭರತ್ ಸಲ್ಲಿಸಿದ ದೂರಿನ ಮೇರೆಗೆ ಪೊಲೀಸರು ತಾಂಡವರಾಮ್ ನನ್ನು ವಶಕ್ಕೆ ಪಡೆದಿದ್ದಾರೆ. ಈತ ಚಿತ್ರ ನಿರ್ಮಾಣದಲ್ಲ್ಲಿ ಹಣ ಹೂಡಿದ್ದನಂತೆ, ಹಾಗಾಗಿ ಚಿತ್ರ ರಿಲೀಸ್ ವಿಳಂಬವಾದಂತೆ ತಳಮಳ ಶುರುವಾಗಿದೆ.

ಬೆಂಗಳೂರು: ನಗರದಲ್ಲಿ ನಿನ್ನೆ ಒಂದು ಶೂಟೌಟ್ ಪ್ರಕರಣ ನಡೆದಿದೆ ಮತ್ತು ಅದರ ವಿವರಗಳನ್ನು ನಮ್ಮ ಬೆಂಗಳೂರು ವರದಿಗಾರ ನೀಡಿದ್ದಾರೆ. ಇದು ದೇವನಾಂಪ್ರಿಯ ಹೆಸರಿನ ಇನ್ನೂ ಬಿಡುಗಡೆಯಾಗಬೇಕಿರುವ ಸಿನಿಮಾದ ವೃತ್ತಾಂತ. ಚಿತ್ರದ ನಟ ತಾಂಡವರಾಮ್, ನಿರ್ಮಾಪಕ ಕುಮಾರಸ್ವಾಮಿ ಮತ್ತು ನಿರ್ದೇಶಕ ಭರತ್ ಮೂವರ ನಡುವೆ ನಗರದ ಚಂದ್ರಾ ಲೇ ಔಟ್ ನಲ್ಲಿರುವ ಈ ಮನೆಯಲ್ಲಿ ಚಿತ್ರದ ರಿಲೀಸ್​ಗೆ ಸಂಬಂಧಿಸಿದಂತೆ ನಡೆದ ಮಾತುಕತೆ ವಿಕೋಪಕ್ಕೆ ಹೋದಾಗ ತಾಂಡವರಾಮ್ ತನ್ನಲ್ಲಿದ್ದ ಲೈಸೆನ್ಸ್​ಡ್ ಪಿಸ್ಟಲ್​ನಿಂದ ಭರತ್ ನತ್ತ ಗುಂಡು ಹಾರಿಸಿದ್ದಾನೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ‘ಇದು ಪ್ರಚಾರದ ಗಿಮಿಕ್’; ಸಲ್ಮಾನ್ ಖಾನ್ ಮನೆಯ ಶೂಟೌಟ್ ಬಗ್ಗೆ ತಂದೆಯ ಪ್ರತಿಕ್ರಿಯೆ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.