ನಟ ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು?

Edited By:

Updated on: May 03, 2026 | 5:59 PM

ಸಿಂಧನೂರಿನಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ , ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಈಶ್ವರ್ ಖಂಡ್ರೆ ಸೇರಿದಂತೆ ಇತರೆ ನಾಯಕರು ಭಾಗವಹಿಸಿದ್ದು, ನವದಂಪತಿಗಳಿಗೆ ಶುಭ ಹಾರೈಸಿದರು. ಆದ್ರೆ, ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲವಾಗಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಹೆಲಿಕಾಪ್ಟರ್​​ ಲ್ಯಾಂಡಿಂಗ್​​ಗೆ ನಿಗದಿಯಾಗಿದ್ದ ಹೆಲಿಪ್ಯಾಡ್​​ ನಲ್ಲಿ ಸುದೀಪ್ ಹೆಲಿಕಾಪ್ಟರ್ ಲ್ಯಾಂಡ್ ಆಗಿರುವ ಘಟನೆ ನಡೆದಿದೆ.

ರಾಯಚೂರು, (ಮೇ 03): ಜಿಲ್ಲೆಯ ಸಿಂಧನೂರಿನಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್(actor sudeep) , ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಈಶ್ವರ್ ಖಂಡ್ರೆ ಸೇರಿದಂತೆ ಇತರೆ ನಾಯಕರು ಭಾಗವಹಿಸಿದ್ದು, ನವದಂಪತಿಗಳಿಗೆ ಶುಭ ಹಾರೈಸಿದರು. ಆದ್ರೆ, ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲವಾಗಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಹೆಲಿಕಾಪ್ಟರ್​​ ಲ್ಯಾಂಡಿಂಗ್​​ಗೆ ನಿಗದಿಯಾಗಿದ್ದ ಹೆಲಿಪ್ಯಾಡ್​​ ನಲ್ಲಿ ಸುದೀಪ್ ಹೆಲಿಕಾಪ್ಟರ್ ಲ್ಯಾಂಡ್ ಆಗಿರುವ ಘಟನೆ ನಡೆದಿದೆ.

ಸಿಂಧನೂರು ನಗರದ ಸರ್ಕಾರಿ ಕಾಲೇಜಿನಲ್ಲಿ ಡಿಸಿಎಂ, ನಟ ಸುದೀಪ್ ಸೇರಿ 3 ಪ್ರತ್ಯೇಕ ಹೆಲಿಪ್ಯಾಡ್ ನಿರ್ಮಿಸಲಾಗಿತ್ತು. ಆದ್ರೆ, ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಮೊದಲು ಬಂದ ನಟ ಸುದೀಪ್ ಇದ್ದ ಹೆಲಿಕಾಪ್ಟರ್, ಡಿಸಿಎಂಗೆ ನಿಗದಿಯಾಗಿದ್ದ ಸ್ಥಳದಲ್ಲಿ ಲ್ಯಾಂಡ್ ಆಗಿದೆ. ಬಳಿಕ ಎಚ್ಚೆತ್ತ ಪೊಲೀಸರು, ಹೆಲಿಕಾಪ್ಟರ್ ರೀ ಲ್ಯಾಂಡಿಂಗ್‌ ಮಾಡುವಂತೆ ಸೂಚನೆ ನೀಡಿದ್ದಾರೆ. ಹೀಗಾಗಿ ತಮಗೆ ನಿಗದಿಪಡಿಸಿದ್ದ ಹೆಲಿಪ್ಯಾಡ್​​ನಲ್ಲಿ ಸುದೀಪ್ ಹೆಲಿಕಾಪ್ಟರ್ ರೀ ಲ್ಯಾಂಡಿಂಗ್‌ ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us